ಬ್ರೇಕಿಂಗ್ ನ್ಯೂಸ್
01-08-23 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಪ್ರೋಟೋಕಾಲ್ ಪ್ರಕಾರ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೆಸರು ಹಾಕದ ಕಾರಣಕ್ಕೆ ಕಾರ್ಯಕ್ರಮ ರದ್ದುಪಡಿಸಿದ್ದಲ್ಲದೆ, ಇರುವೈಲು ಗ್ರಾಮ ಪಂಚಾಯತ್ ಪಿಡಿಓ ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣ ಅಧಿಕಾರಿಯನ್ನು ಅಮಾನತು ಮಾಡಿರುವ ಕ್ರಮವನ್ನು ಆಕ್ಷೇಪಿಸಿ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ನ್ಯಾಯ ಕೇಳಿದ ಪ್ರಸಂಗ ನಡೆದಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಉಮಾನಾಥ ಕೋಟ್ಯಾನ್, ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತದ ಪ್ರೋಟೋಕಾಲ್ ಪ್ರಕಾರವೇ ಮುದ್ರಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರ ಹೆಸರನ್ನೂ ಹಾಕಲಾಗಿತ್ತು. ಆದರೆ, ಎರಡು ದಿನ ಇರುವಾಗ ಕಾರ್ಯಕ್ರಮ ರದ್ದುಪಡಿಸಿದ್ದಲ್ಲದೆ ಇಬ್ಬರು ಅಧಿಕಾರಿಗಳನ್ನು ಜಿಪಂ ಸಿಇಓ, ವಿನಾಕಾರಣ ಸಸ್ಪೆಂಡ್ ಮಾಡಿದ್ದಾರೆ ಎಂದರು. ಇದಕ್ಕೆ ಆಕ್ಷೇಪಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ಗಮನಕ್ಕೆ ವಿಷಯದ ವಿವರಣೆ ನೀಡಿದರು.

ಆದರೆ, ಈ ಬಗ್ಗೆ ಇತರೇ ಬಿಜೆಪಿ ಶಾಸಕರು ಆಕ್ಷೇಪ ಸೂಚಿಸಿದ್ದಲ್ಲದೆ, ಈ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದರು. ಯಾಕಾಗಿ ಇಬ್ಬರನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ವಿವರಣೆ ಕೊಡಬೇಕು ಎಂದು ಉಮಾನಾಥ ಕೋಟ್ಯಾನ್ ಕೇಳಿಕೊಂಡರು. ಮುಖ್ಯಮಂತ್ರಿ ಜಿಲ್ಲಾಧಿಕಾರಿಯನ್ನು ಪ್ರಶ್ನೆ ಮಾಡಿದ್ದು, ಪ್ರೋಟೋಕಾಲ್ ಮೀರದಂತೆ ಸೂಚನೆ ನೀಡಿದರು. ಪ್ರೋಟೋಕಾಲ್ ತಪ್ಪು ಮಾಡಿದ್ದರೆ, ಜಿಲ್ಲಾಧಿಕಾರಿಯನ್ನು ಸಸ್ಪೆಂಡ್ ಮಾಡಿ. ಅವರು ಹೇಳಿದ ರೀತಿಯಲ್ಲೇ ಆಮಂತ್ರಣ ಪತ್ರಿಕೆ ಮಾಡಲಾಗಿತ್ತು ಎಂದು ಹೇಳಿ ಪತ್ರಿಕೆಯನ್ನು ಮುಖ್ಯಮಂತ್ರಿಯ ಕೈಗಿತ್ತರು ಉಮಾನಾಥ ಕೋಟ್ಯಾನ್.
ಸಚಿವ ಪ್ರಿಯಾಂಕ ಖರ್ಗೆ ಹೆಸರು ಹಾಕಿಲ್ಲ ಎಂದು ಅಧಿಕಾರಿಗಳನ್ನು ಅಮಾನತು ಮಾಡಬೇಕಿತ್ತೇ.. ರಾಜ್ಯದಲ್ಲಿ 5950 ಗ್ರಾಮ ಪಂಚಾಯತ್ ಗಳಿವೆ. ಎಲ್ಲದಕ್ಕೂ ಸಚಿವರಿಗೆ ಬರುವುದಕ್ಕೆ ಆಗುತ್ತಾ.. ಹಾಗಂತ, ಸಸ್ಪೆಂಡ್ ಮಾಡುವುದಾ.. ಈ ಬಗ್ಗೆ ನಾವು ಶಾಸಕರು ಫೋನ್ ಮಾಡಿ ಕೇಳಿದರೂ, ಜಿಲ್ಲಾಧಿಕಾರಿ, ಸಿಇಓ ಕ್ಯಾರ್ ಮಾಡಿಲ್ಲ. ಕನಿಷ್ಠ ಗೌರವ ಕೊಟ್ಟಿಲ್ಲ ಎಂದು ದೂರಿದರು ಕೋಟ್ಯಾನ್. ಯಾವುದೇ ಪಕ್ಷದ ಶಾಸಕರು ಆದರೂ ಅಧಿಕಾರಿಗಳು ಗೌರವ ಕೊಡಬೇಕು. ಅವರು ಜನರಿಂದ ಆಯ್ಕೆಯಾಗಿ ಬಂದವರು. ಅವರಿಗೆ ಗೌರವ ಕೊಡಲೇಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿ ಸಭೆಯಲ್ಲಿ ತಿಳಿಸಿದರು.
ಜುಲೈ 31ರಂದು ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕರ ಸೂಚನೆಯಂತೆ ರದ್ದುಪಡಿಸಲಾಗಿತ್ತು. ಸಚಿವ ಪ್ರಿಯಾಂಕ ಖರ್ಗೆ ಸೂಚನೆ ಪ್ರಕಾರ, ಕಾರ್ಯಕ್ರಮ ರದ್ದು ಮತ್ತು ಇಬ್ಬರು ಅಧಿಕಾರಿಗಳ ಅಮಾನತು ಆಗಿತ್ತು ಎಂದು ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದರು.
Moodbidri Mla Umanth Kotian slams Congress leaders before CM for suspending PDO and EO for missing Priyank Kharge name in invitation.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm