ಬ್ರೇಕಿಂಗ್ ನ್ಯೂಸ್
02-08-23 05:57 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 2: ಸೌಜನ್ಯಾ ಕೊಲೆ ಪ್ರಕರಣದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಚಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಸುದ್ದಿಗೋಷ್ಟಿ ನಡೆಸಿದ್ದಾರೆ.
ಸೌಜನ್ಯ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಸಂಘಟನೆಯ ಮುಖಂಡರಾದ ಎಂ.ಬಿ.ಪುರಾಣಿಕ್ ಮತ್ತು ಶರಣ್ ಪಂಪ್ವೆಲ್, ಸೌಜನ್ಯಾ ಪ್ರಕರಣ ಇತ್ಯರ್ಥ ಆಗದೆ ಇರೋದು ವ್ಯವಸ್ಥೆಗೆ ಕಪ್ಪು ಚುಕ್ಕೆ. ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನಾವೂ ಆಗ್ರಹಿಸುತ್ತಿದ್ದೇವೆ. ಆದರೆ ಯಾವ ರೀತಿ ತನಿಖೆಯಾಗಬೇಕು ಎಂಬುದು ವ್ಯವಸ್ಥೆಗೆ ಬಿಟ್ಟದ್ದು. ನೈಜ ಆರೋಪಿ ಪತ್ತೆಗಾಗಿ ಮತ್ತೊಮ್ಮೆ ಮರು ತನಿಖೆ ಆಗಬೇಕೆಂದು ಆಗ್ರಹಿಸುತ್ತೇವೆ ಎಂದಿದ್ದಾರೆ.
ತನ್ಮೂಲಕ ಪ್ರಕರಣದ ನಿಜವಾದ ಆರೋಪಿ ಯಾರು ಎನ್ನೋದು ಗೊತ್ತಾಗಬೇಕು. ಆರೋಪಿಗಳಿಗೆ ಶಿಕ್ಷೆಯಾಗುವ ತನಕ ಈ ಪ್ರಕರಣ ಅಂತ್ಯವಾಗೋದಿಲ್ಲ. ಇದಕ್ಕಾಗಿ ಎಲ್ಲಾ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಿದ್ದೇವೆ. ಸೌಜನ್ಯಳಿಗೆ ನ್ಯಾಯ ಸಿಗಲೆಂದು ಎಲ್ಲ ಊರಿನ ದೇವಸ್ಥಾನ, ದೈವಸ್ಥಾನಗಳಲ್ಲಿ ನಮ್ಮ ಕಾರ್ಯಕರ್ತರು ಪ್ರಾರ್ಥನೆ ಮಾಡಲಿದ್ದಾರೆ.
ಧರ್ಮಸ್ಥಳ ಕ್ಷೇತ್ರ ಇವತ್ತು ನಿನ್ನೆಯದಲ್ಲ, ಕ್ಷೇತ್ರಕ್ಕೆ ಅದರದ್ದೇ ಆದ ಹಿನ್ನೆಲೆ, ಇತಿಹಾಸವಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಜನರು ಈ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಾರೆ. ಸಾಮಾಜಿಕ, ಶೈಕ್ಷಣಿಕವಾಗಿ ಬೇರೆ ಬೇರೆ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ ಕ್ಷೇತ್ರ. ಯಾವುದೇ ಕ್ಷೇತ್ರಕ್ಕೆ, ಧರ್ಮಕ್ಕೆ ಅಪಚಾರ ಆದಾಗ ವಿಶ್ವ ಹಿಂದೂ ಪರಿಷತ್ ವಿರೋಧಿಸುತ್ತದೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ, ಅವಮಾನವಾಗುವುದನ್ನ ನಾವು ಸಹಿಸೋದಿಲ್ಲ.
ಯಾರೇ ಆಗಲಿ ಕ್ಷೇತ್ರಕ್ಕೆ ಮುತ್ತಿಗೆ ಹಾಕುವುದು, ಮತ್ತೊಂದನ್ನ ನಾವು ಸಹಿಸೋದಿಲ್ಲ. ಸೌಜನ್ಯ ಅತ್ಯಾಚಾರ ಪ್ರಕರಣ ಹಾಗೂ ಕ್ಷೇತ್ರಕ್ಕೆ ತಾಳೆ ಹಾಕುವುದನ್ನ ನಾವು ಸಹಿಸೋದಿಲ್ಲ. ಕ್ಷೇತ್ರದ ಗೌರವ, ಪ್ರತಿಷ್ಠೆಯನ್ನ ಯಾವ ಬೆಲೆ ಕೊಟ್ಟಾದರೂ ವಿಶ್ವ ಹಿಂದು ಪರಿಷತ್ ಕಾಪಾಡುತ್ತದೆ. ಹಾಗಂತ, ನಾವು ಪೂರ್ವಾಗ್ರಹ ಪೀಡಿತರಾಗಿ ಯಾರ ಬಗ್ಗೆಯೂ ಆರೋಪಿಸುವುದಿಲ್ಲ ಎಂದು ಹೇಳಿದ್ದಾರೆ.
Dharmasthala temple name being misused in Sowjanya rape case is intolerable says Vishva Hindu Parishad in Mangalore
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm