ಬ್ರೇಕಿಂಗ್ ನ್ಯೂಸ್
02-08-23 09:15 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 2: ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರು ನಾಪತ್ತೆಯಾಗಿದ್ದಾರೆ. ಒಬ್ಬ ಮಹಿಳೆ ಮಗುವಿನ ಜೊತೆ ದೇವಸ್ಥಾನಕ್ಕೆ ಬಂದು ನಾಪತ್ತೆಯಾಗಿದ್ದರೆ ಮತ್ತೊಬ್ಬರು ದಂತ ಚಿಕಿತ್ಸೆಗೆಂದು ಹೋದವರು ಮರಳಿ ಮನೆ ಸೇರಿಲ್ಲ.
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ದೇವಸ್ಯದ ನಿವಾಸಿ ಮಾಯಿಲಪ್ಪ ಅವರ ಪುತ್ರಿ ತೀರ್ಥಲತಾ ಎಂಬವರನ್ನು ಗದಗ ಮೂಲದ ಶಿವರಾಜ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಇತ್ತೀಚೆಗೆ ಮನೆಗೆ ಬಂದ ತೀರ್ಥಲತಾ ಜುಲೈ 31ರಂದು ಹಲ್ಲು ನೋವಿನ ಕಾರಣದಿಂದ ದಂತ ವೈದ್ಯರ ಬಳಿ ಚಿಕಿತ್ಸೆಗೆಂದು ಹೋದವರು ಮನೆಗೆ ವಾಪಸಾಗಿಲ್ಲ. ಸಾಕಷ್ಟು ಹುಡುಕಾಟ ನಡೆಸಿದ್ರೂ ತೀರ್ಥಲತಾ ಕಾಣದ ಕಾರಣದಿಂದ ಅವರ ತಂದೆ ಮಾಯಿಲಪ್ಪ ಗೌಡ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಮಹಿಳೆ ಮಗುವಿನೊಂದಿಗೆ ಮಿಸ್ಸಿಂಗ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಶೇಖರ್ ಎಂಬವರು ತನ್ನ ಪತ್ನಿ ಹರ್ಷಿತಾ ಮತ್ತು ಮೂರು ವರ್ಷ ಪ್ರಾಯದ ಮಗು ಭರತ್ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ದೇವರ ದರ್ಶನದ ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿದ್ದು ಅಲ್ಲಿದ್ದಾಗ ಪತ್ನಿ ಹಾಗೂ ಮಗು ಕಾಣೆಯಾಗಿದ್ದಾಗಿ ದೂರು ನೀಡಿದ್ದಾರೆ. ಎಲ್ಲ ಕಡೆ ಹುಡುಕಾಡಿದರೂ ಪತ್ನಿ ಹಾಗೂ ಮಗು ಸಿಗದ ಕಾರಣ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಜಶೇಖರ್ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸ್ನೇಹಿತರ ಕುಟುಂಬದ ಜತೆ ಧರ್ಮಸ್ಥಳಕ್ಕೆ ಬಂದಿದ್ದು ಆಗಸ್ಟ್ 1ರಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸುಬ್ರಹ್ಮಣ್ಯ ತಲುಪಿದ್ದರು. ದೇವರ ದರ್ಶನ ಮುಗಿಸಿ ಮಧ್ಯಾಹ್ನ ಹೊತ್ತಿಗೆ ಖರೀದಿಗೆಂದು ತೆರಳಿದ್ದರು. ಈ ವೇಳೆ, ಹರ್ಷಿತಾ ಮತ್ತು ಮಗು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಬಸ್ ನಿಲ್ದಾಣ, ದೇವಸ್ಥಾನದ ಆವರಣದ ಅಂಗಡಿಗಳಲ್ಲಿ ಹಾಗೂ ಕ್ಷೇತ್ರದ ಪ್ರಮುಖ ಸ್ಥಳದ ಸಿಸಿ ಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
Two women go missing after visiting Kukke Subramanya Temple in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm