ಬ್ರೇಕಿಂಗ್ ನ್ಯೂಸ್
03-08-23 09:06 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು, ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಉಡುಪಿ ವಿಡಿಯೋ ಘಟನೆ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ಹಿಂದೆ ರಾಕ್ಷಸಿಯರು ಬಂದಿದ್ದರು. ಈಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡಲಿದ್ದೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು.


ಸೌಟು, ಪೊರಕೆ ಹಿಡಿಯುವ ತಾಯಂದಿರ ಕೈಗಳು ಶಸ್ತ್ರ ಹಿಡಿಯಬೇಕು. ಅನ್ಯಾಯಕ್ಕೆದುರಾಗಿ ತಲವಾರು ಹಿಡಿಯಬೇಕು. ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ.
ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್ ಮಾಡಿದ್ದಾರೆ. ನೇತ್ರ ಕಾಲೇಜಿನ ಡಾ.ಅಬ್ದುಲ್ ಖಾದರ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಐದು ಬಾರಿ ನೋಟ್ಸ್ ಬರೆಯುವ ಶಿಕ್ಷೆ ನೀಡಿದ್ದಾರೆ. ಈ ಶಿಕ್ಷೆಯನ್ನು ಬ್ಯೂಟಿಫುಲ್ ಶಿಕ್ಷೆ ಅಂತಾ ಖಾದರ್ ಹೇಳಿದ್ದಾನೆ. ಅಬ್ದುಲ್ ಖಾದರನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು. ಖಾದರ್ ಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬ್ಯೂಟಿಫುಲ್ ಶಿಕ್ಷೆ ನೀಡೋಕೆ ನಮಗೂ ಗೊತ್ತಿದೆ. ನಮ್ಮ ಕಾರ್ಯಕರ್ತರೂ ನಿನಗೆ ಬ್ಯೂಟಿ ಫುಲ್ ಶಿಕ್ಷೆ ನೀಡುತ್ತಾರೆ.

ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿಡಿಯೋ ತೆಗೆದು ಬ್ಲಾಕ್ಮೇಲ್ ಮಾಡುವ ತಂತ್ರ ಹಾಗೇ ನಡೆಯುವಂಥದ್ದಲ್ಲ. ಮಕ್ಕಳಿರುವಾಗಲೇ ಮದ್ರಸಾದಲ್ಲಿ ಈ ರೀತಿಯ ಶಿಕ್ಷಣ ನೀಡುತ್ತಿರುವ ಬಗ್ಗೆ ಅನುಮಾನ ಇದೆ. ರಾಜ್ಯ ಸರ್ಕಾರ ಕೂಡಲೇ ಮದ್ರಸ ಶಿಕ್ಷಣವನ್ನು ಬ್ಯಾನ್ ಮಾಡಬೇಕು. ಉಡುಪಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು. ಇದರ ಹಿಂದೆ ಭಯೋತ್ಪಾದಕ ಕೃತ್ಯದ ಹುನ್ನಾರ ಇದೆಯೇ ಎಂಬುದನ್ನು ಪತ್ತೆ ಮಾಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Sharan Pumpwell well tells people to hold sword instead of broom to fight in justice, Sparks controversy in Udupi.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm