ಉಡುಪಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ ;  9 ಮಂದಿ ಮೀನುಗಾರರ ರಕ್ಷಣೆ

05-08-23 07:53 pm       Udupi Correspondent   ಕರಾವಳಿ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿಯಾಗಿದ್ದು, 9 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ.

ಉಡುಪಿ, ಆಗಸ್ಟ್ 5: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿಯಾಗಿದ್ದು, 9 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ.

ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ ಬೆಳಗ್ಗೆ ದೋಣಿ ಮೀನುಗಾರಿಕೆಗೆ ತೆರಳಿತ್ತು. ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಇದಾಗಿದ್ದು, 9 ಮಂದಿ ಮೀನುಗಾರರು ತೆರಳಿದ್ರು.

5 ನಾಟಿಕಲ್ ಮೈಲುಗಳ ದೂರದಲ್ಲಿ ದೋಣಿ ಪಲ್ಟಿಯಾಗಿದ್ದು, ಸಮೀಪದ ದೋಣಿಗಳಿಗೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಬಳಿಕ ದೋಣಿಯನ್ನು ಮರವಂತೆ ಬಂದರಿಗೆ ರವಾನೆ ಮಾಡಲಾಗಿದೆ.

ಅಪಘಾತದಲ್ಲಿ ದೋಣಿಯಲ್ಲಿದ್ದ ಬಲೆ, ಇಂಜಿನ್ ಹಾನಿಯಾಗಿದ್ದು, ಒಟ್ಟು 2 ಲಕ್ಷಕ್ಕೂ ಅಧಿಕ ನಷ್ಟವಾಗಿದೆ.

Fishing boat accident at Udupi 9 fisherman rescued. The boat which got entangled in huge waves overturned. Luckily, all nine fishermen in it were saved by fishermen on other boats. The loss is estimated to be Rs 1.5 lac.