ಬ್ರೇಕಿಂಗ್ ನ್ಯೂಸ್
05-08-23 11:03 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 5: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಕೇರಳ ಮೂಲದ ಉದ್ಯಮಿಯೊಬ್ಬ ಎಕರೆಗಟ್ಟಲೆ ಸರ್ಕಾರಿ ಭೂಮಿಯನ್ನು ಕಬಳಿಸಿದ ಆರೋಪ ಕೇಳಿಬಂದಿದೆ. ಸ್ಥಳೀಯರ ದೂರಿನಂತೆ ಸ್ಥಳಕ್ಕೆ ಬಂದ ಪುತ್ತೂರು ಸಹಾಯಕ ಕಮಿಷನರ್ ಆರೋಪಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಿದ್ದಾರೆ.
ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣಾಲು, ಕೋಲ್ಪೆ ಗ್ರಾಮದಲ್ಲಿ ಏಳೆಂಟು ಎಕ್ರೆ ಸರ್ಕಾರಿ ಭೂಮಿಯನ್ನು ಕೇರಳ ಮೂಲದ ಉದ್ಯಮಿಯೊಬ್ಬ ಕಬಳಿಸಿರುವ ಆರೋಪ ಕೇಳಿಬಂದಿದೆ. ಸೆಬಾಸ್ಟಿಯನ್ ಎಂಬ ಕೊಚ್ಚಿ ಮೂಲದ ವ್ಯಕ್ತಿ ಎರಡು ವರ್ಷಗಳ ಹಿಂದೆ ಕಡಬದಲ್ಲಿ ಖಾಸಗಿ ಜಾಗ ಖರೀದಿಸಿ ಪ್ಲಾಸ್ಟಿಕ್ ಬ್ಯಾಗ್ ತಯಾರಿಕೆ ಕಂಪನಿಯನ್ನು ಆರಂಭಿಸಿದ್ದ. ಇದೀಗ ಆಸುಪಾಸಿನ ಸರಕಾರಿ ಜಾಗವನ್ನು ಕಬಳಿಸಿದ್ದು, ಕೋಣಾಲು, ಕೋಲ್ಪೆ ಭಾಗದ ನೂರಾರು ಜನರು ಬಳಸುತ್ತಿದ್ದ ಜಿಪಂ ರಸ್ತೆಯನ್ನೇ ಮಣ್ಣು ಹಾಕಿ ನುಂಗಿ ಹಾಕಿದ್ದಾನೆ. ರಸ್ತೆಗೆ ಪೂರ್ತಿ ಮಣ್ಣು ಹಾಕಿದ್ದು, ಅದು ತನ್ನದೆಂದು ಹಕ್ಕು ಸ್ಥಾಪಿಸಿದ್ದಾನೆ ಎಂದು ಸ್ಥಳೀಯರು ದೂರಿದ್ದಾರೆ.



ಸ್ಥಳೀಯರು ಈ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್ ಅವರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಿ ಅಕ್ರಮವಾಗಿ ಭೂಮಿ ಕಬಳಿಸಿದ ವಿಚಾರದಲ್ಲಿ ಗೋಳಿತೊಟ್ಟು ಪಂಚಾಯತ್ ಪಿಡಿಓಗೆ ತರಾಟೆಗೆತ್ತಿಕೊಂಡಿದ್ದಾರೆ. ಜಿಲ್ಲಾ ಪಂಚಾಯತ್ ರಸ್ತೆಗೆ ಮಣ್ಣು ಹಾಕಿದ್ದು, ಈ ಭಾಗದ ನಿವಾಸಿಗಳಿಗೆ ರಸ್ತೆ ಇಲ್ಲದಾಗಿದೆ. ಅಲ್ಲದೆ, ಆಸುಪಾಸಿನ ಜಾಗದಲ್ಲಿ ಬಡ ಜನರನ್ನು ಒಕ್ಕಲೆಬ್ಬಿಸಿದ್ದಾನೆಂದು ಸ್ಥಳೀಯ ಉಸ್ಮಾನ್ ಎಂಬವರು ದೂರಿದ್ದಾರೆ.



ಅಧಿಕಾರಿಗಳ ಭೇಟಿ ವೇಳೆ ಮೇಲ್ನೋಟಕ್ಕೆ ಜಿಪಂ ರಸ್ತೆಯನ್ನು ಕಡಿದು ಹಾಕಿದ್ದು, ಸರಕಾರಿ ಜಾಗ ಕಬಳಿಸಿರುವುದು ಕಂಡುಬಂದಿದೆ. ಇದೇ ವೇಳೆ, ಸ್ಥಳದಲ್ಲಿ ಸರ್ವೆ ನಡೆಸುವುದಲ್ಲದೆ, ಅಕ್ರಮವಾಗಿ ಜಾಗ ಕಬಳಿಸಿದ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಪಿಡಿಓಗೆ ಸೂಚನೆ ನೀಡಿದ್ದಾರೆ.
ಕಡಬದ ನೆಲ್ಯಾಡಿ, ಉಪ್ಪಿನಂಗಡಿ, ಉದನೆ ಭಾಗದಲ್ಲಿ ಕೇರಳ ಮೂಲದ ವ್ಯಕ್ತಿಗಳು ಅಕ್ರಮವಾಗಿ ಜಾಗ ಕಬಳಿಸಿ ನೆಲೆಯೂರಿದ್ದು, ಇದಕ್ಕೆಲ್ಲ ಸ್ಥಳೀಯ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆಂಬ ಆರೋಪ ಇದೆ. ಇದೀಗ ಕಡಬದ ಕೋಣಾಲು ಗ್ರಾಮದಲ್ಲಿ ಏಳೆಂಟು ಎಕ್ರೆ ಸರಕಾರಿ ಜಾಗ ಕಬಳಿಸಿದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಕಂದಾಯ ಅಧಿಕಾರಿಗಳು ಖಡಕ್ ಕ್ರಮ ಕೈಗೊಂಡರೆ ಮಾತ್ರ ಜಾಗ ಕಬಳಿಸುವ ನುಂಗಣ್ಣರಿಗೆ ತಕ್ಕ ಶಾಸ್ತಿ ಮಾಡಬಹುದು.
A Kerala-based businessman has been accused of grabbing acres of government land at Kadaba in Dakshina Kannada district. Puttur Assistant Commissioner, who reached the spot on the complaint of the locals, instructed to file a criminal case against the accused person.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm