ಬ್ರೇಕಿಂಗ್ ನ್ಯೂಸ್
05-08-23 11:03 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 5: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಕೇರಳ ಮೂಲದ ಉದ್ಯಮಿಯೊಬ್ಬ ಎಕರೆಗಟ್ಟಲೆ ಸರ್ಕಾರಿ ಭೂಮಿಯನ್ನು ಕಬಳಿಸಿದ ಆರೋಪ ಕೇಳಿಬಂದಿದೆ. ಸ್ಥಳೀಯರ ದೂರಿನಂತೆ ಸ್ಥಳಕ್ಕೆ ಬಂದ ಪುತ್ತೂರು ಸಹಾಯಕ ಕಮಿಷನರ್ ಆರೋಪಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಿದ್ದಾರೆ.
ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣಾಲು, ಕೋಲ್ಪೆ ಗ್ರಾಮದಲ್ಲಿ ಏಳೆಂಟು ಎಕ್ರೆ ಸರ್ಕಾರಿ ಭೂಮಿಯನ್ನು ಕೇರಳ ಮೂಲದ ಉದ್ಯಮಿಯೊಬ್ಬ ಕಬಳಿಸಿರುವ ಆರೋಪ ಕೇಳಿಬಂದಿದೆ. ಸೆಬಾಸ್ಟಿಯನ್ ಎಂಬ ಕೊಚ್ಚಿ ಮೂಲದ ವ್ಯಕ್ತಿ ಎರಡು ವರ್ಷಗಳ ಹಿಂದೆ ಕಡಬದಲ್ಲಿ ಖಾಸಗಿ ಜಾಗ ಖರೀದಿಸಿ ಪ್ಲಾಸ್ಟಿಕ್ ಬ್ಯಾಗ್ ತಯಾರಿಕೆ ಕಂಪನಿಯನ್ನು ಆರಂಭಿಸಿದ್ದ. ಇದೀಗ ಆಸುಪಾಸಿನ ಸರಕಾರಿ ಜಾಗವನ್ನು ಕಬಳಿಸಿದ್ದು, ಕೋಣಾಲು, ಕೋಲ್ಪೆ ಭಾಗದ ನೂರಾರು ಜನರು ಬಳಸುತ್ತಿದ್ದ ಜಿಪಂ ರಸ್ತೆಯನ್ನೇ ಮಣ್ಣು ಹಾಕಿ ನುಂಗಿ ಹಾಕಿದ್ದಾನೆ. ರಸ್ತೆಗೆ ಪೂರ್ತಿ ಮಣ್ಣು ಹಾಕಿದ್ದು, ಅದು ತನ್ನದೆಂದು ಹಕ್ಕು ಸ್ಥಾಪಿಸಿದ್ದಾನೆ ಎಂದು ಸ್ಥಳೀಯರು ದೂರಿದ್ದಾರೆ.



ಸ್ಥಳೀಯರು ಈ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್ ಅವರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಿ ಅಕ್ರಮವಾಗಿ ಭೂಮಿ ಕಬಳಿಸಿದ ವಿಚಾರದಲ್ಲಿ ಗೋಳಿತೊಟ್ಟು ಪಂಚಾಯತ್ ಪಿಡಿಓಗೆ ತರಾಟೆಗೆತ್ತಿಕೊಂಡಿದ್ದಾರೆ. ಜಿಲ್ಲಾ ಪಂಚಾಯತ್ ರಸ್ತೆಗೆ ಮಣ್ಣು ಹಾಕಿದ್ದು, ಈ ಭಾಗದ ನಿವಾಸಿಗಳಿಗೆ ರಸ್ತೆ ಇಲ್ಲದಾಗಿದೆ. ಅಲ್ಲದೆ, ಆಸುಪಾಸಿನ ಜಾಗದಲ್ಲಿ ಬಡ ಜನರನ್ನು ಒಕ್ಕಲೆಬ್ಬಿಸಿದ್ದಾನೆಂದು ಸ್ಥಳೀಯ ಉಸ್ಮಾನ್ ಎಂಬವರು ದೂರಿದ್ದಾರೆ.



ಅಧಿಕಾರಿಗಳ ಭೇಟಿ ವೇಳೆ ಮೇಲ್ನೋಟಕ್ಕೆ ಜಿಪಂ ರಸ್ತೆಯನ್ನು ಕಡಿದು ಹಾಕಿದ್ದು, ಸರಕಾರಿ ಜಾಗ ಕಬಳಿಸಿರುವುದು ಕಂಡುಬಂದಿದೆ. ಇದೇ ವೇಳೆ, ಸ್ಥಳದಲ್ಲಿ ಸರ್ವೆ ನಡೆಸುವುದಲ್ಲದೆ, ಅಕ್ರಮವಾಗಿ ಜಾಗ ಕಬಳಿಸಿದ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಪಿಡಿಓಗೆ ಸೂಚನೆ ನೀಡಿದ್ದಾರೆ.
ಕಡಬದ ನೆಲ್ಯಾಡಿ, ಉಪ್ಪಿನಂಗಡಿ, ಉದನೆ ಭಾಗದಲ್ಲಿ ಕೇರಳ ಮೂಲದ ವ್ಯಕ್ತಿಗಳು ಅಕ್ರಮವಾಗಿ ಜಾಗ ಕಬಳಿಸಿ ನೆಲೆಯೂರಿದ್ದು, ಇದಕ್ಕೆಲ್ಲ ಸ್ಥಳೀಯ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆಂಬ ಆರೋಪ ಇದೆ. ಇದೀಗ ಕಡಬದ ಕೋಣಾಲು ಗ್ರಾಮದಲ್ಲಿ ಏಳೆಂಟು ಎಕ್ರೆ ಸರಕಾರಿ ಜಾಗ ಕಬಳಿಸಿದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಕಂದಾಯ ಅಧಿಕಾರಿಗಳು ಖಡಕ್ ಕ್ರಮ ಕೈಗೊಂಡರೆ ಮಾತ್ರ ಜಾಗ ಕಬಳಿಸುವ ನುಂಗಣ್ಣರಿಗೆ ತಕ್ಕ ಶಾಸ್ತಿ ಮಾಡಬಹುದು.
A Kerala-based businessman has been accused of grabbing acres of government land at Kadaba in Dakshina Kannada district. Puttur Assistant Commissioner, who reached the spot on the complaint of the locals, instructed to file a criminal case against the accused person.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm