ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm