ಬ್ರೇಕಿಂಗ್ ನ್ಯೂಸ್
07-08-23 12:03 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 8: ಸೌಜನ್ಯಾ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಸಾಯಿಸ್ತಾರೆ! ಆದರೆ ಆ ರಹಸ್ಯವನ್ನು ನಾನು ಸಾಯೋದಕ್ಕು ಮೊದಲು ಹೇಳದೇ ಬಿಡೋದಿಲ್ಲ ಎಂದು ಬೆಳ್ತಂಗಡಿ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ ಸೌಜನ್ಯಾ ಪ್ರಕರಣದಲ್ಲಿ ಸಿಬಿಐ ತನಿಖೆಯ ದಾರಿ ತಪ್ಪಿಸಿದ್ದು ಯಾರೆಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಸೌಜನ್ಯಾ ಪ್ರಕರಣವನ್ನ ಉದ್ದೇಶಪೂರ್ವಕ ದಾರಿ ತಪ್ಪಿಸಲಾಗಿದೆ. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯಾ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರು ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ಅಧಿವೇಶನಕ್ಕೂ ಮುನ್ನ ನನ್ನನ್ನು ಕರೆದು, ಇದನ್ನ ಪ್ರಸ್ತಾಪ ಮಾಡಬೇಡ, ಪ್ರಕರಣ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದಿದ್ದರು. ಆದರೆ ವಿಧಾನಸಭೆ ಕೊಠಡಿಯಲ್ಲಿ ನಾನು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಸೌಜನ್ಯಾ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿದ್ದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯಾ ಪ್ರಕರಣವನ್ನ ಸಿಬಿಐಗೆ ವಹಿಸ್ತೇನೆ ಎಂದಿದ್ದರು.
ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ಭಾವನೆ, ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆ ಅರ್ಧದಲ್ಲಿರುವಾಗಲೇ ಇದರಲ್ಲಿ ಮೋಸ ಆಗಿದೆ ಎನ್ನೋದು ತಿಳಿದುಬಂತು. ಏನು ಮೊಸ, ಯಾರು ಕಾರಣ ಅಂತ ಅದನ್ನ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ಈ ವಿಚಾರ ಹೇಳಿಯೇ ಸಿದ್ಧ. ಸೌಜನ್ಯಾ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು? ಅನ್ಯಾಯ, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಅದಕ್ಕೂ ಮೊದಲು ನನ್ನನ್ನು ಸಾಯಿಸಿದ್ರೂ ಸಾಯಿಸಬಹುದು. ಸಾಯಿಸಲು ಅಷ್ಟು ಸುಲಭ ಇಲ್ಲ. ನಾನೂ ದೈವ ಭಕ್ತ. ಆದರೆ ನಾನು ಸಾಯೋದ್ರೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ.
ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಪ್ರಕರಣವನ್ನ ಹೇಗೆ ತನಿಖೆ ಮಾಡಬೇಕೆಂಬುದನ್ನ ಹೇಳುತ್ತೇನೆ. ಇಂಥವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿ ಹಾಕಿದವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಮುಖ್ಯಮಂತ್ರಿ ಅವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಶಾಸ್ತಿ ಅನುಭವಿಸಲೇ ಬೇಕು.
ಸೌಜನ್ಯ ಕುಟುಂಬಸ್ಥರನ್ನ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಅವರಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದು ಸೌಜನ್ಯಾ ಪ್ರಕರಣ ನಡೆದ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾಗಿದ್ದ ವಸಂತ ಬಂಗೇರ ಹೇಳಿಕೆ ನೀಡಿದ್ದಾರೆ.
ಪ್ರಕರಣದ ಮರು ತನಿಖೆಗೆ ರಾಜ್ಯಾದ್ಯಂತ ಹೆಚ್ಚುತ್ತಿರುವ ಒತ್ತಡ, ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕರು ಈ ರೀತಿ ಹೇಳಿಕೆ ನೀಡಿರುವುದು ಕರಾವಳಿ ಭಾಗದಲ್ಲಿ ಮತ್ತೆ ಸಂಚಲನ ಎಬ್ಬಿಸಿದೆ.
Soujanya rape case, former MLA Vasant bangera marks controversy says I know who killed Soujanya. I know who changed the mind of CBI, in case I leak the secrets they will kill me he added.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm