ಬ್ರೇಕಿಂಗ್ ನ್ಯೂಸ್
08-08-23 04:08 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕರುನಾಡಿನ ಜಾನಪದ ಕ್ರೀಡೆ ಕಂಬಳವನ್ನು ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಆಯೋಜಿಸಬೇಕೆಂಬ ಹಲವು ವರ್ಷದ ಕನಸೊಂದು ನನಸಾಗುವ ಹಂತಕ್ಕೆ ಬಂದಿದ್ದು, ಈ ಮೂಲಕ ಕಂಬಳ ಕ್ಷೇತ್ರದಲ್ಲಿ ಹೊಸ ಇತಿಹಾಸವೊಂದು ಸೃಷ್ಟಿಯಾಗಲಿದೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ಕಂಬಳ ಕರೆಗೆ ರಾಜ ಮಹಾರಾಜ 'ಜಯಚಾಮರಾಜೇಂದ್ರ ಒಡೆಯರ್ ಜೋಡುಕರೆ ಕಂಬಳ' ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಕಂಬಳ ಕ್ರೀಡೆ ಸಾಮಾನ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ನಡೆಯುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕಂಬಳ ಕ್ರೀಡೆ ಹೊಸ ಹಿರಿಮೆಯನ್ನು ಪಡೆದುಕೊಂಡಿದ್ದು, ಹೊರ ಜಿಲ್ಲೆ, ಹೊರರಾಜ್ಯ, ದೇಶ-ವಿದೇಶಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.
ಪೇಟಾ ಸಂಸ್ಥೆ ಕಂಬಳ ಕ್ರೀಡೆಗೆ ವಿರೋಧವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ನಿಷೇಧವಾದ ಸಂದರ್ಭ ಇಡೀ ಕರುನಾಡು ಮಾತ್ರವಲ್ಲದೆ ದೇಶಾದ್ಯಂತ ಕಂಬಳ ಪರ ಹೋರಾಟ ವ್ಯಕ್ತವಾಯಿತು. ಇದಾದ ಬಳಿಕ ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಸುಪ್ರೀಂ ಕೋರ್ಟ್ ಕೂಡಾ ಪೇಟಾ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಮೂಲಕ ಕಂಬಳ ಕ್ರೀಡೆಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಸುಮಾರು 3 ವರ್ಷಗಳಿಂದ ಕಂಬಳ ಕ್ರೀಡೆಯನ್ನು ರಾಜ್ಯ ರಾಜ್ಯಧಾನಿಯಲ್ಲಿ ಆಯೋಜಿಸಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಅದಕ್ಕೆ ಈಗ ಕಾಲಕೂಡಿ ಬಂದಿದೆ.
ಬೆಂಗಳೂರು ತುಳು ಕೂಟ ಈ ಬಾರಿ ಸುವರ್ಣ ಸಂಭ್ರಮದಲ್ಲಿದ್ದು, ಇದರ ಸವಿ ನೆನಪಿಗಾಗಿ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ. ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ರೂವಾರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಿದ್ಧತೆ ನಡೆಯುತ್ತಿದೆ. ಮೈಸೂರಿನ ಒಡೆಯರ್ ಕುಟುಂಬಕ್ಕೆ ಸಂಬಂಧಪಟ್ಟ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೆ ಮೈಸೂರು ರಾಜಮನೆತನದಿಂದ ಅನುಮತಿ ಸಿಕ್ಕಿದ್ದು, ಸಮಿತಿಯು ಈಗಾಗಲೇ ಎರಡು ಸುತ್ತಿನ ಸಭೆ ನಡೆದಿದೆ. ಕಂಬಳಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದ್ದು, ಸರಕಾರಿ ಮಟ್ಟದಲ್ಲಿಅನುಮತಿ ಸಿಗಲು ಬಾಕಿಯಿದೆ. ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿಯಾಗುವುದಾಗಿ ಸಮಿತಿ ತಿಳಿಸಿದೆ.
ಅಂತಿಮ 8 ಸುತ್ತಿನ ಕೋಣಗಳು:
ಕಂಬಳದ ಎಲ್ಲ ವಿಭಾಗದ ಸ್ಪರ್ಧೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕಳೆದ ಬಾರಿ ಅಂತಿಮ 8 ಸುತ್ತಿನಲ್ಲಿ ಸ್ಪರ್ಧಿಸಿದ ಕೋಣಗಳಿಗೆ ಪ್ರಥಮ ಪ್ರಾಶಸ್ತ್ಯದಲ್ಲಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಕೋಣದ ಯಜಮಾನರು, ಕಂಬಳ ಸಮಿತಿ, ಕಂಬಳ ಸಂಘಟಕರ ಜತೆ ಮಾತನಾಡಿ ಸಹಕಾರ ಕೋರಲಾಗುವುದು. ಕೋಣಗಳನ್ನು ರೈಲಿನಲ್ಲಿ ಸಾಗಾಟ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನಮ್ಮ ಕಂಬಳ ಹಿರಿಮೆಯನ್ನು ರಾಜ್ಯ, ದೇಶಕ್ಕೆ ಪರಿಚಯಿಸುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಆಯೋಜಿಸುವ ಉದ್ದೇಶ ಹೊಂದಿದ್ದು, ನಮ್ಮ ರಾಜ್ಯಕ್ಕೆ ಅನನ್ಯ ಕೊಡುಗೆ ನೀಡಿದ ಮೈಸೂರು ಒಡೆಯರ ಹೆಸರನ್ನೇ ಐತಿಹಾಸಿಕ ಕಂಬಳ ಕರೆಗೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ತುಳುನಾಡಿನ ಆಹಾರ, ಸಂಸ್ಕೃತಿ-ಆಚಾರ ವಿಚಾರವನ್ನು ಪರಿಚಯಿಸುವ ಕೆಲಸವೂ ಆಗಲಿದೆ ಎಂದು ಪುತ್ತೂರು ಶಾಸಕ ಅಶೋಖ್ ರೈ ತಿಳಿಸಿದ್ದಾರೆ.
Kambala to be held first time in Bangalore by Tulu Koota.Popular Janapada sport of the state, ‘Kambala’ will be held at Bengaluru Palace Grounds in November this year. Kambala sport has been planned in order to spread its glory in the state and all over the country on the eve of golden jubilee of Tulu Koota.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm