ಬ್ರೇಕಿಂಗ್ ನ್ಯೂಸ್
06-11-20 10:18 am Udupi Correspondent ಕರಾವಳಿ
ಉಡುಪಿ, ನವೆಂಬರ್ 06 : 'ಸಿದ್ದರಾಮಯ್ಯನಿಗೆ ಹುಚ್ಚು' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಸಂಜೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದ ಅವರನ್ನು ಮಾಧ್ಯಮದ ಮಂದಿ ಮಾತಿಗೆಳೆದರು. ಸಿದ್ದರಾಮಯ್ಯ, ಸಿಎಂ ಬದಲಾವಣೆ ಆಗುತ್ತೆ ಎಂದಿದ್ದಾರಲ್ಲಾ ಎಂಬ ಪ್ರಶ್ನೆಗೆ ಗರಂ ಆದ ಈಶ್ವರಪ್ಪ, ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ. ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ.
ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು, ಸಿದ್ದರಾಮಯ್ಯನಿಗೆ ಇಂತಹ ಸುದ್ದಿಗಳೇನು ಆಕಾಶದಿಂದ ಉದುರಿ ಬಿತ್ತಾ? ಮೋದಿ, ನಡ್ಡಾ, ಅಮಿತ್ ಶಾ ಅವರೇನಾದರೂ ಫೋನ್ ಮಾಡಿ ಹೇಳಿದ್ರಾ..? ನಾನು ದೇವಸ್ಥಾನದಲ್ಲಿ ಇದೀನಿ. ಇಲ್ಲದಿದ್ದರೆ ಸಿದ್ದರಾಮಯನಿಗೆ ಇನ್ನೂ ಕೆಟ್ಟಪದ ಬಳಸ್ತಿದ್ದೆ. ಸಿದ್ದರಾಮಯ್ಯ ಇಂತಹ ಸುದ್ದಿಗಳನ್ನು ಹರಡುವುದನ್ನು ಬಿಟ್ಟು ಜನರ ಮಧ್ಯೆ ಹೋಗಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
'ವಿನಯ ಕುಲಕರ್ಣಿ ಬಂಧನ ಬಿಜೆಪಿಯ ರಾಜಕೀಯ ಪ್ರೇರಿತ ಕೃತ್ಯ' ಎಂಬ ಸಿದ್ಧರಾಮಯ್ಯ ಮಾತಿಗೆ ತಿರುಗೇಟು ನೀಡಿದ ಈಶ್ವರಪ್ಪ, ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದಾ? ಹಾಗಿದ್ದರೆ ಕಾಂಗ್ರೆಸ್ ಪಕ್ಷ ಕೊಲೆಗಳಿಗೆ ಬೆಂಬಲ ಕೊಡುತ್ತಾ.. ಹಾಗಂತ ಸಿದ್ದರಾಮಯ್ಯ ಒಪ್ಪಿಕೊಂಡು ಬಿಡಲಿ, ನಮ್ಮ ಪಕ್ಷದ ಅನೇಕರನ್ನು ಕಾಂಗ್ರೆಸ್ ಸರ್ಕಾರ ಜೈಲಿಗೆ ಕಳಿಸಿದ್ದು ಕೂಡ ರಾಜಕೀಯ ಪ್ರೇರಿತ ಕೃತ್ಯವೇ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧ ಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ, ತಪ್ಪಿತಸ್ಥ ಅಲ್ಲದಿದ್ದರೆ ವಿನಯ ಕುಲಕರ್ಣಿ ಬಿಡುಗಡೆಯಾಗಿ ಹೊರಗೆ ಬರಲಿ ಎಂದರು. ಅಲ್ಲದೆ, ಕಾಂಗ್ರೆಸ್ ನಾಯಕರ ಸರ್ಕಾರದ ಪ್ರತಿ ನಡೆಯನ್ನು ವಿರೋಧಿಸುವ ಧೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.
Udupi Eshwarappa calls Siddaramaiah mad person. Eshwarappa lashed out during his visit to Udupi temple.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm