Actress Malashri visits Koragajja temple at Kuthar in Mangalore: ಮೂರೇ ತಿಂಗಳಲ್ಲಿ ಬೇಡಿಕೆ ಈಡೇರಿಸಿದ ಕೊರಗಜ್ಜ ; ಕುತ್ತಾರು ಆದಿಸ್ಥಳಕ್ಕೆ ಬಂದು ಹರಕೆ ತೀರಿಸಿದ ಖ್ಯಾತ ನಟಿ ಮಾಲಾಶ್ರೀ  

09-08-23 12:38 pm       Mangalore Correspondent   ಕರಾವಳಿ

ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ‌.

ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ‌.

ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.

ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.

Kannada Actress Malashri visits Swamy Koragajja temple at Kuthar in Mangalore with her family to offer prayers.