ಬ್ರೇಕಿಂಗ್ ನ್ಯೂಸ್
09-08-23 03:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಪತಿಯೇ ಕಳವುಗೈದು ಮಾರಾಟ ಮಾಡಿದ್ದಾರೆಂದು ಪತ್ನಿಯೇ ನಗರದ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪತಿ ಇಲ್ಯಾಸ್ ಮತ್ತು ಪ್ರಭಾಕರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪತಿ ಮತ್ತು ಪತ್ನಿ ನಡುವೆ ಕೆಲವು ತಿಂಗಳಿನಿಂದ ವಿರಸ ಉಂಟಾಗಿದ್ದು ಇತ್ತೀಚೆಗೆ ಎಪ್ರಿಲ್ ತಿಂಗಳಲ್ಲಿ ಜಗಳ ನಡೆದು ಪತ್ನಿ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದರು. ಗಂಡನ ಮನೆ ಕದ್ರಿ ಕೆಪಿಟಿ ಬಳಿಯ ಆಶಿಯಾನ ಅಪಾರ್ಟ್ಮೆಂಟ್ ನಲ್ಲಿತ್ತು. ಆದರೆ, ಮದುವೆಯ ಸಂದರ್ಭದಲ್ಲಿ ತಾಯಿ ಮನೆಯಿಂದ ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದ ಚಿನ್ನಾಭರಣವನ್ನು ಫ್ಲಾಟಿನ ಕಪಾಟಿನಲ್ಲೇ ಇರಿಸಿದ್ದರು. ಒಟ್ಟು 75 ಪವನ್ ಚಿನ್ನವಿದ್ದು, ಈ ವಿಷಯ ಮಹಿಳೆ ಮತ್ತು ಅವರ ಗಂಡನಾದ ಇಲಿಯಾಸ್ಗೆ ಮಾತ್ರ ತಿಳಿದಿತ್ತು.
ಇತ್ತೀಚೆಗೆ ಫ್ಲ್ಯಾಟ್ಗೆ ಹೋಗಿ ವಾಚ್ಮ್ಯಾನ್ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್ಗೆ ಬಂದಿಲ್ಲ ಎಂದು ತಿಳಿಸಿದ್ದರು. ಮಹಿಳೆ ಅನುಮಾನಗೊಂಡು ಮನೆಯೊಳಗೆ ಹೋಗಿ ಬಂಗಾರವಿಟ್ಟ ಕಪಾಟಿನಲ್ಲಿ ನೋಡಿದಾಗ ಲಾಕರ್ ಸಮೇತ ಚಿನ್ನ ಮಾಯವಾಗಿತ್ತು. ಗಂಡನಿಗೆ ಕರೆ ಮಾಡಿದಾಗ 'ನಾನು ಲಾಕರ್ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನೀನು ಏನ್ಮಾಡ್ತೀಯಾ ಎಂದು ದಮ್ಕಿ ಹಾಕಿದ್ದ. ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದಿದ್ದಾಗಿ ಹೇಳಿದ್ದ. ಅದಕ್ಕೆ ಬಡ್ಡಿ ಕಟ್ಟಲಾಗದೇ ಪ್ರಭಾಕರ್ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಹೇಳಿರುವುದಾಗಿ ತಿಳಿಸಿದ್ದ.
ಅಡವಿಟ್ಟ ಚಿನ್ನದ ಬಗ್ಗೆ ಬ್ಯಾಂಕಿನಲ್ಲಿ ಪರಿಶೀಲನೆ ನಡೆಸಿದಾಗ, ಪ್ರಭಾಕರ್ ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಚಿನ್ನ ಕಳಕೊಂಡ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
A wife has filed a complaint with the police against her husband for stealing 75 grams of gold that was kept in a locker. Renisha Noronha is the complainant and her husband Mohammed Ilyas is the accused.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm