ಬ್ರೇಕಿಂಗ್ ನ್ಯೂಸ್
09-08-23 03:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಪತಿಯೇ ಕಳವುಗೈದು ಮಾರಾಟ ಮಾಡಿದ್ದಾರೆಂದು ಪತ್ನಿಯೇ ನಗರದ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪತಿ ಇಲ್ಯಾಸ್ ಮತ್ತು ಪ್ರಭಾಕರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪತಿ ಮತ್ತು ಪತ್ನಿ ನಡುವೆ ಕೆಲವು ತಿಂಗಳಿನಿಂದ ವಿರಸ ಉಂಟಾಗಿದ್ದು ಇತ್ತೀಚೆಗೆ ಎಪ್ರಿಲ್ ತಿಂಗಳಲ್ಲಿ ಜಗಳ ನಡೆದು ಪತ್ನಿ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದರು. ಗಂಡನ ಮನೆ ಕದ್ರಿ ಕೆಪಿಟಿ ಬಳಿಯ ಆಶಿಯಾನ ಅಪಾರ್ಟ್ಮೆಂಟ್ ನಲ್ಲಿತ್ತು. ಆದರೆ, ಮದುವೆಯ ಸಂದರ್ಭದಲ್ಲಿ ತಾಯಿ ಮನೆಯಿಂದ ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದ ಚಿನ್ನಾಭರಣವನ್ನು ಫ್ಲಾಟಿನ ಕಪಾಟಿನಲ್ಲೇ ಇರಿಸಿದ್ದರು. ಒಟ್ಟು 75 ಪವನ್ ಚಿನ್ನವಿದ್ದು, ಈ ವಿಷಯ ಮಹಿಳೆ ಮತ್ತು ಅವರ ಗಂಡನಾದ ಇಲಿಯಾಸ್ಗೆ ಮಾತ್ರ ತಿಳಿದಿತ್ತು.
ಇತ್ತೀಚೆಗೆ ಫ್ಲ್ಯಾಟ್ಗೆ ಹೋಗಿ ವಾಚ್ಮ್ಯಾನ್ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್ಗೆ ಬಂದಿಲ್ಲ ಎಂದು ತಿಳಿಸಿದ್ದರು. ಮಹಿಳೆ ಅನುಮಾನಗೊಂಡು ಮನೆಯೊಳಗೆ ಹೋಗಿ ಬಂಗಾರವಿಟ್ಟ ಕಪಾಟಿನಲ್ಲಿ ನೋಡಿದಾಗ ಲಾಕರ್ ಸಮೇತ ಚಿನ್ನ ಮಾಯವಾಗಿತ್ತು. ಗಂಡನಿಗೆ ಕರೆ ಮಾಡಿದಾಗ 'ನಾನು ಲಾಕರ್ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನೀನು ಏನ್ಮಾಡ್ತೀಯಾ ಎಂದು ದಮ್ಕಿ ಹಾಕಿದ್ದ. ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದಿದ್ದಾಗಿ ಹೇಳಿದ್ದ. ಅದಕ್ಕೆ ಬಡ್ಡಿ ಕಟ್ಟಲಾಗದೇ ಪ್ರಭಾಕರ್ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಹೇಳಿರುವುದಾಗಿ ತಿಳಿಸಿದ್ದ.
ಅಡವಿಟ್ಟ ಚಿನ್ನದ ಬಗ್ಗೆ ಬ್ಯಾಂಕಿನಲ್ಲಿ ಪರಿಶೀಲನೆ ನಡೆಸಿದಾಗ, ಪ್ರಭಾಕರ್ ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಚಿನ್ನ ಕಳಕೊಂಡ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
A wife has filed a complaint with the police against her husband for stealing 75 grams of gold that was kept in a locker. Renisha Noronha is the complainant and her husband Mohammed Ilyas is the accused.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm