ಬ್ರೇಕಿಂಗ್ ನ್ಯೂಸ್
10-08-23 03:17 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.
ಎಡಿಜಿಪಿ ಅವರು ಅಧಿಕಾರಿಗಳಿಂದ ತನಿಖೆಯ ವಿವರಗಳನ್ನು ಪಡೆದುಕೊಂಡು ಸಲಹೆ, ಸೂಚನೆಗಳನ್ನು ನೀಡಿದರು.
ಇನ್ನು ಕಾಲೇಜಿಗೆ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜುಲೈ 18ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ, ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿಯ ಹೇಳಿಕೆಗಳನ್ನು ಸಿಐಡಿ ತಂಡ ದಾಖಲಿಸಿಕೊಂಡಿದೆ.
ಸಿಐಡಿ ತನಿಖೆ ವೇಳೆ ಕಾಣಿಸಿಕೊಂಡ ಪ್ಲ್ಯಾಸ್ಟಿಕ್ ಗೊಂಬೆ ಗಮನ ಸೆಳೆಯಿತು. ಕಾಲೇಜಿಗೆ ಗೊಂಬೆಯನ್ನು ತಂದು ಪ್ರಕರಣವನ್ನು ಸಿಐಡಿ ತಂಡ ಮರು ಸೃಷ್ಟಿ ಮಾಡಿತು. ಘಟನೆ ನಡೆದ ಶೌಚಾಲಯ, ಕಾಲೇಜಿನ ವರಾಂಡಾದಲ್ಲಿ ಮಹಜರು ಪ್ರಕ್ರಿಯೆ ನಡೆಸಲು ಗೊಂಬೆಯನ್ನು ಬಳಸಿಕೊಳ್ಳಲಾಯಿತು. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಅಂಜುಮಾಲಾ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ತನಿಖಾ ಪ್ರಕ್ರಿಯೆ ನಡೆಯಿತು.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿತ್ತು. ಹೀಗಾಗಿ ಉನ್ನತ ಮಟ್ಟದ ತನಿಖೆಗೆ ಸಿಐಡಿ ತಂಡ ನಗರಕ್ಕೆ ಭೇಟಿ ನೀಡಿದೆ.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ದ್ವಿತೀಯ ಪಿಯುಸಿಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿಯ ಹಿಂದು ವಿದ್ಯಾರ್ಥಿನಿಯೊಬ್ಬಳ ಟಾಯ್ಲೆಟ್ ಬಳಕೆಯ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂಬ ವಿವಾದ ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
Udupi toilet video case, CID ADGP Manish says we are waiting for FSL Report from the team.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm