ಬ್ರೇಕಿಂಗ್ ನ್ಯೂಸ್
10-08-23 03:17 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.
ಎಡಿಜಿಪಿ ಅವರು ಅಧಿಕಾರಿಗಳಿಂದ ತನಿಖೆಯ ವಿವರಗಳನ್ನು ಪಡೆದುಕೊಂಡು ಸಲಹೆ, ಸೂಚನೆಗಳನ್ನು ನೀಡಿದರು.
ಇನ್ನು ಕಾಲೇಜಿಗೆ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜುಲೈ 18ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ, ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿಯ ಹೇಳಿಕೆಗಳನ್ನು ಸಿಐಡಿ ತಂಡ ದಾಖಲಿಸಿಕೊಂಡಿದೆ.
ಸಿಐಡಿ ತನಿಖೆ ವೇಳೆ ಕಾಣಿಸಿಕೊಂಡ ಪ್ಲ್ಯಾಸ್ಟಿಕ್ ಗೊಂಬೆ ಗಮನ ಸೆಳೆಯಿತು. ಕಾಲೇಜಿಗೆ ಗೊಂಬೆಯನ್ನು ತಂದು ಪ್ರಕರಣವನ್ನು ಸಿಐಡಿ ತಂಡ ಮರು ಸೃಷ್ಟಿ ಮಾಡಿತು. ಘಟನೆ ನಡೆದ ಶೌಚಾಲಯ, ಕಾಲೇಜಿನ ವರಾಂಡಾದಲ್ಲಿ ಮಹಜರು ಪ್ರಕ್ರಿಯೆ ನಡೆಸಲು ಗೊಂಬೆಯನ್ನು ಬಳಸಿಕೊಳ್ಳಲಾಯಿತು. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಅಂಜುಮಾಲಾ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ತನಿಖಾ ಪ್ರಕ್ರಿಯೆ ನಡೆಯಿತು.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿತ್ತು. ಹೀಗಾಗಿ ಉನ್ನತ ಮಟ್ಟದ ತನಿಖೆಗೆ ಸಿಐಡಿ ತಂಡ ನಗರಕ್ಕೆ ಭೇಟಿ ನೀಡಿದೆ.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ದ್ವಿತೀಯ ಪಿಯುಸಿಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿಯ ಹಿಂದು ವಿದ್ಯಾರ್ಥಿನಿಯೊಬ್ಬಳ ಟಾಯ್ಲೆಟ್ ಬಳಕೆಯ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂಬ ವಿವಾದ ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
Udupi toilet video case, CID ADGP Manish says we are waiting for FSL Report from the team.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm