ಬ್ರೇಕಿಂಗ್ ನ್ಯೂಸ್
10-08-23 03:17 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.
ಎಡಿಜಿಪಿ ಅವರು ಅಧಿಕಾರಿಗಳಿಂದ ತನಿಖೆಯ ವಿವರಗಳನ್ನು ಪಡೆದುಕೊಂಡು ಸಲಹೆ, ಸೂಚನೆಗಳನ್ನು ನೀಡಿದರು.
ಇನ್ನು ಕಾಲೇಜಿಗೆ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜುಲೈ 18ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ, ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿಯ ಹೇಳಿಕೆಗಳನ್ನು ಸಿಐಡಿ ತಂಡ ದಾಖಲಿಸಿಕೊಂಡಿದೆ.
ಸಿಐಡಿ ತನಿಖೆ ವೇಳೆ ಕಾಣಿಸಿಕೊಂಡ ಪ್ಲ್ಯಾಸ್ಟಿಕ್ ಗೊಂಬೆ ಗಮನ ಸೆಳೆಯಿತು. ಕಾಲೇಜಿಗೆ ಗೊಂಬೆಯನ್ನು ತಂದು ಪ್ರಕರಣವನ್ನು ಸಿಐಡಿ ತಂಡ ಮರು ಸೃಷ್ಟಿ ಮಾಡಿತು. ಘಟನೆ ನಡೆದ ಶೌಚಾಲಯ, ಕಾಲೇಜಿನ ವರಾಂಡಾದಲ್ಲಿ ಮಹಜರು ಪ್ರಕ್ರಿಯೆ ನಡೆಸಲು ಗೊಂಬೆಯನ್ನು ಬಳಸಿಕೊಳ್ಳಲಾಯಿತು. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಅಂಜುಮಾಲಾ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ತನಿಖಾ ಪ್ರಕ್ರಿಯೆ ನಡೆಯಿತು.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿತ್ತು. ಹೀಗಾಗಿ ಉನ್ನತ ಮಟ್ಟದ ತನಿಖೆಗೆ ಸಿಐಡಿ ತಂಡ ನಗರಕ್ಕೆ ಭೇಟಿ ನೀಡಿದೆ.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ದ್ವಿತೀಯ ಪಿಯುಸಿಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿಯ ಹಿಂದು ವಿದ್ಯಾರ್ಥಿನಿಯೊಬ್ಬಳ ಟಾಯ್ಲೆಟ್ ಬಳಕೆಯ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂಬ ವಿವಾದ ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
Udupi toilet video case, CID ADGP Manish says we are waiting for FSL Report from the team.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
19-05-24 12:13 pm
Mangalore Correspondent
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm