ಬ್ರೇಕಿಂಗ್ ನ್ಯೂಸ್
10-08-23 08:24 pm Mangalore Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿ ಎಸ್ಡಿಪಿಐಯೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ನಡೆಸಿದ್ದು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಸಮಬಲದ ಪೈಪೋಟಿಯಲ್ಲಿ ಟಾಸ್ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಗ್ರಾಮ ಪಂಚಾಯತ್ ನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಎಸ್ಡಿಪಿಐ ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಬಿಜೆಪಿ ಸದಸ್ಯರು ಎಸ್ಡಿಪಿಐ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಸಮಬಲ ಮತ ಪಡೆದುಕೊಂಡಿದ್ದಾರೆ. ನಂತರ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಚೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.
ಪಂಚಾಯತ್ ನಲ್ಲಿ ಬಿಜೆಪಿ ಪೂರ್ಣ ಬಹುಮತ ಹೊಂದಿದ್ದರೂ, ಇಬ್ಬರು ಸದಸ್ಯರು ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪಕ್ಷವನ್ನು ಮುಖಭಂಗಕ್ಕೀಡು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸತ್ಯರಾಜ್ ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ವಿರೋಧಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ನಿರಾಶೆಗೊಂಡಿದ್ದಾರೆ. ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
Mangalore Bjp ties up with enemy party SDPI for Talapdy gram Panchyath elections, President post to SDPI.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm