ಬ್ರೇಕಿಂಗ್ ನ್ಯೂಸ್
10-08-23 10:21 pm Mangalore Correspondent ಕರಾವಳಿ
ಉಡುಪಿ, ಆಗಸ್ಟ್ 10: 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಜೊತೆಗೆ ಮಹಿಳೆಯೊಬ್ಬರ ಜೊತೆಗೆ ಸಂಬಂಧ ಇದೆಯೆಂದು ವದಂತಿ ಹಬ್ಬಿತ್ತು. ಅಲ್ಲದೆ, ಆರೋಪಿತ ಮಹಿಳೆಯ ಫೋಟೋವನ್ನು ಕೆಲವು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿತ್ತು. ಗಂಡನೇ ತನ್ನ ಪತ್ನಿ ಜೊತೆಗೆ ಸಂಸದರು ಸಂಬಂಧ ಇಟ್ಟುಕೊಂಡಿದ್ದಾರೆಂದು ಹೇಳಿಕೆ ನೀಡಿದ್ದರಿಂದ ಸುದ್ದಿಗೆ ರೆಕ್ಕೆ ಪುಕ್ಕ ಬಂದಿತ್ತು. ಘಟನೆ ಬಗ್ಗೆ ಸಂತ್ರಸ್ತ ಮಹಿಳೆ ತನ್ನ ವಿರುದ್ಧ ಕೆಲವರು ಸೇರಿ ತೇಜೋವಧೆ ಮಾಡಿದ್ದಾರೆಂದು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಮಂಗಳೂರಿನ ವಕೀಲ ರಾಘವೇಂದ್ರ ರಾವ್ ಮತ್ತು ಸತೀಶ್ ಶೆಟ್ಟಿ ಎಂಬವರು ಆರೋಪಿಗಳಾಗಿದ್ದರು. ಇದೀಗ ತಮ್ಮ ಮೇಲಿನ ಪ್ರಕರಣ ರದ್ದು ಪಡಿಸಬೇಕೆಂದು ರಾಘವೇಂದ್ರ ರಾವ್, ಉಡುಪಿ ಜಿಲ್ಲಾ ಸೆಷನ್ಸ್ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಸಕಾರಣ ಇಲ್ಲದಿದ್ದರೂ ದುರುದ್ದೇಶದಿಂದ ಚಾರ್ಜ್ ಶೀಟ್ ಹಾಕಲಾಗಿದೆ. ವಾಟ್ಸಪ್ ಮೆಸೇಜ್ ಆಧಾರದಲ್ಲಿ ತನ್ನ ಮೇಲೆ ಆರೋಪ ಹೊರಿಸಿದ್ದು ಸರಿಯಲ್ಲ ಇತ್ಯಾದಿ ಕಾರಣಗಳನ್ನು ಮುಂದಿಟ್ಟು ತನ್ನ ವಿರುದ್ಧದ ಕೇಸು ವಜಾಗೊಳಿಸುವಂತೆ ರಾಘವೇಂದ್ರ ರಾವ್ ಅರ್ಜಿ ಹಾಕಿದ್ದರು.
ಆದರೆ ನೀಡಿರುವ ಕಾರಣಗಳನ್ನು ಮುಂದಿಟ್ಟು ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅಲ್ಲದೆ, ಕೆಳಗಿನ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶಾಂತವೀರ ಶಿವಪ್ಪ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಮಾನಹಾನಿ ಸೇರಿದಂತೆ ಐಟಿ ಆಕ್ಟ್ ನಡಿ ಕೇಸು ದಾಖಲಾಗಿತ್ತು.
Nalin Kateel affair news, Mangalore Senior lawyer Raghavendra Rao application to cancel case rejected by Udupi court. Advocate Raghavendra Rao had made false propaganda of Nalin Kateel having affair with some other married women, after which the women filed a case in 2014.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm