ಬ್ರೇಕಿಂಗ್ ನ್ಯೂಸ್
11-08-23 06:55 pm Mangalore Correspondent ಕರಾವಳಿ
ಉಳ್ಳಾಲ, ಆ.11: ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹರೇಕಳದ ಕುತ್ತಿಮುಗೇರು ಎಂಬಲ್ಲಿ ಹಡಿಲು ಬಿದ್ದಿದ್ದ ನಾಲ್ಕು ಗದ್ದೆಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದಲೇ ಭತ್ತದ ನಾಟಿಯನ್ನು ನಡೆಸಿ ಗಮನ ಸೆಳೆದಿದ್ದಾರೆ.






ಶುಕ್ರವಾರ ಬೆಳಗ್ಗೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 80ರಷ್ಟು ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಗದ್ದೆಯಲ್ಲಿ ಭತ್ತದ ನಾಟಿ ನಡೆಸಿದರು.
ವಿದ್ಯಾರತ್ನ ಶಾಲಾ ಸಂಚಾಲಕರು, ಕೃಷಿಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿದ್ಯಾರ್ಥಿಗಳಿಗೆ ಭತ್ತದ ನಾಟಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿಯೇ ನಮ್ಮ ಮೂಲ. ನಮ್ಮ ಹಿರಿಯರು ಕಷ್ಟ ಪಟ್ಟು ಬೇಸಾಯ ಮಾಡಿದ್ದರಿಂದ ನಾವಿಂದು ಈ ಸ್ಥಾನಕ್ಕೆ ಬರುವಂತಾಗಿದೆ. ಇಂದಿನ ದಿವಸಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಆಳುಗಳೇ ಸಿಗದೇ ಯಂತ್ರಗಳ ಮೊರೆ ಹೋಗುವಂತಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತೀ ವರ್ಷ ನಡೆಸುತ್ತಿದ್ದು ಇಂದು ನೆಟ್ಟ ಪೈರು ದೊಡ್ಡದಾದಾಗ ಭತ್ತದ ಕಟಾವನ್ನೂ ವಿದ್ಯಾರ್ಥಿಗಳಿಂದಲೇ ನಡೆಸಲಾಗುವುದು ಎಂದರು. ವಿದ್ಯಾರ್ಥಿನಿ ರಿಷಲ್ ರಿಯೋನ ಡಿಸೋಜ ಮಾತನಾಡಿ ನನ್ನ ತಂದೆ, ಅಜ್ಜಂದಿರು ಕೃಷಿಕರಾದರೂ ಇತ್ತೀಚಿಗೆ ನಾವು ಕೃಷಿಯಿಂದ ವಿಮುಕ್ತರಾಗಿದ್ದೇವೆ. ಶಾಲಾ ಶಿಕ್ಷಕರು ಮತ್ತೆ ಕೃಷಿಯನ್ನ ನೆನಪಿಸುವ ಉತ್ತಮ ಕಾರ್ಯ ನಡೆಸಿದ್ದು ಸಂತಸವಾಗಿದೆ ಎಂದರು.
Mangalore Agriculture lessons for high school students from English medium school teachers at Ullal.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm