ಬ್ರೇಕಿಂಗ್ ನ್ಯೂಸ್
11-08-23 06:55 pm Mangalore Correspondent ಕರಾವಳಿ
ಉಳ್ಳಾಲ, ಆ.11: ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹರೇಕಳದ ಕುತ್ತಿಮುಗೇರು ಎಂಬಲ್ಲಿ ಹಡಿಲು ಬಿದ್ದಿದ್ದ ನಾಲ್ಕು ಗದ್ದೆಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದಲೇ ಭತ್ತದ ನಾಟಿಯನ್ನು ನಡೆಸಿ ಗಮನ ಸೆಳೆದಿದ್ದಾರೆ.






ಶುಕ್ರವಾರ ಬೆಳಗ್ಗೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 80ರಷ್ಟು ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಗದ್ದೆಯಲ್ಲಿ ಭತ್ತದ ನಾಟಿ ನಡೆಸಿದರು.
ವಿದ್ಯಾರತ್ನ ಶಾಲಾ ಸಂಚಾಲಕರು, ಕೃಷಿಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿದ್ಯಾರ್ಥಿಗಳಿಗೆ ಭತ್ತದ ನಾಟಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿಯೇ ನಮ್ಮ ಮೂಲ. ನಮ್ಮ ಹಿರಿಯರು ಕಷ್ಟ ಪಟ್ಟು ಬೇಸಾಯ ಮಾಡಿದ್ದರಿಂದ ನಾವಿಂದು ಈ ಸ್ಥಾನಕ್ಕೆ ಬರುವಂತಾಗಿದೆ. ಇಂದಿನ ದಿವಸಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ಆಳುಗಳೇ ಸಿಗದೇ ಯಂತ್ರಗಳ ಮೊರೆ ಹೋಗುವಂತಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತೀ ವರ್ಷ ನಡೆಸುತ್ತಿದ್ದು ಇಂದು ನೆಟ್ಟ ಪೈರು ದೊಡ್ಡದಾದಾಗ ಭತ್ತದ ಕಟಾವನ್ನೂ ವಿದ್ಯಾರ್ಥಿಗಳಿಂದಲೇ ನಡೆಸಲಾಗುವುದು ಎಂದರು. ವಿದ್ಯಾರ್ಥಿನಿ ರಿಷಲ್ ರಿಯೋನ ಡಿಸೋಜ ಮಾತನಾಡಿ ನನ್ನ ತಂದೆ, ಅಜ್ಜಂದಿರು ಕೃಷಿಕರಾದರೂ ಇತ್ತೀಚಿಗೆ ನಾವು ಕೃಷಿಯಿಂದ ವಿಮುಕ್ತರಾಗಿದ್ದೇವೆ. ಶಾಲಾ ಶಿಕ್ಷಕರು ಮತ್ತೆ ಕೃಷಿಯನ್ನ ನೆನಪಿಸುವ ಉತ್ತಮ ಕಾರ್ಯ ನಡೆಸಿದ್ದು ಸಂತಸವಾಗಿದೆ ಎಂದರು.
Mangalore Agriculture lessons for high school students from English medium school teachers at Ullal.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm