ಬ್ರೇಕಿಂಗ್ ನ್ಯೂಸ್
11-08-23 09:22 pm Mangalore Correspondent ಕರಾವಳಿ
ಉಳ್ಳಾಲ, ಆ.11: ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಎಸ್ಡಿಪಿಐ ಗೆಲುವಿಗೆ ಕಾರಣರಾದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.
ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಝ್ ಮತ್ತು ಮಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಸೆ, ಆಮಿಷ, ಒತ್ತಡದಿಂದ ಅಡ್ಡ ಮತದಾನ ಮಾಡಿ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಆದರೂ ಅವರು ಪಕ್ಷಕ್ಕೆ ದ್ರೋಹ ಬಗೆದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಎಸ್ ಡಿಪಿಐಗೆ ಬೆಂಬಲ ನೀಡುವ ಅಗತ್ಯವೂ ಇಲ್ಲ. ಗ್ರಾಮ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ 'ಬಿ' ಮೀಸಲಾತಿ ಬಂದಿದ್ದು ಬಿಜೆಪಿಯಲ್ಲಿ ಪುಷ್ಪಲತಾ ಶೆಟ್ಟಿ ಮಾತ್ರ ಇದ್ದ ಕಾರಣ ಅವಿರೋಧವಾಗಿ ಉಪಾಧ್ಯಕ್ಷರಾಗಿದ್ದಾರೆ. ಎಸ್ ಡಿಪಿಐಗೆ ಬೆಂಬಲ, ಸಹಕಾರ ನೀಡಿಲ್ಲ, ಈ ಬಗ್ಗೆ ತಪ್ಪು ಸಂದೇಶ ಹೋಗಿದ್ದು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮುಖಂಡರಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪುಷ್ಪಲತಾ ಶೆಟ್ಟಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.
Talapady Gram Panchyath elections, two BJP Muslim supporters deatined from party for Supporting SDPI.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm