ಬ್ರೇಕಿಂಗ್ ನ್ಯೂಸ್
11-08-23 10:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಹಳೆಯಂಗಡಿ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ ವಿಚಾರ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿಗೆ ಕಾರಣವಾಗಿತ್ತು. ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆಸಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸುವಂತಾಗಿತ್ತು.
ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ವಾರ್ಡ್ ಗಳಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಹಾಗೂ ಬಿಜೆಪಿ ಬೆಂಬಲಿತ 11 ಸದಸ್ಯರು ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿ ಎರಡು ಪಕ್ಷಗಳ ಬೆಂಬಲಿತರ ಸಮಬಲದಿಂದಾಗಿ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಧಿಕಾರ ಪಟ್ಟ ಒಲಿದು ಬಂದಿತ್ತು. ಈ ಬಾರಿ ಅಧ್ಯಕ್ಷ ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರೊಬ್ಬರು ಭ್ರಷ್ಟಾಚಾರ ಆರೋಪದ ಕಾರಣ ಸದಸ್ಯತ್ವ ರದ್ದುಗೊಂಡಿರುವುದು ಜಟಾಪಟಿಗೆ ಕಾರಣ.
ಕೋರ್ಟ್ ತೀರ್ಪಿನ ಪ್ರಕಾರ ಆ ಮಹಿಳೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ ಎಂಬುದು ಬಿಜೆಪಿ ನಾಯಕರು ವಾದಿಸಿದರೆ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂಬುದು ಕಾಂಗ್ರೆಸ್ ಕಾರ್ಯಕರ್ತರ ವಾದವಾಗಿತ್ತು. ಇದರಿಂದ ಚುನಾವಣೆ ನಡೆಸಲಾಗದೆ ಸ್ಥಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಜಮಾಯಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮಧ್ಯಾಹ್ನ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆದು 1 ಗಂಟೆಗೆ ಫಲಿತಾಂಶ ಬರಬೇಕಾಗಿದ್ದರೂ, ಸಂಜೆ 5 ಗಂಟೆ ವರೆಗೆ ಚುನಾವಣೆ ನಡೆದಿರಲಿಲ್ಲ. ನಂತರ ಚುನಾವಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರನ್ನು ಹೊರಗಿಟ್ಟು, ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಬಿಜೆಪಿ ಬೆಂಬಲಿತ ಪೂರ್ಣಿಮಾ ಅಧ್ಯಕ್ಷರಾಗಿ ಮತ್ತು ಚಂದ್ರಿಕಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಇವರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದು ಕಾಂಗ್ರೆಸ್ ಬೆಂಬಲಿತರು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು. ಮಧ್ಯಾಹ್ನದಿಂದಲೇ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಿಥುನ್ ರೈ ಸ್ಥಳದಲ್ಲಿ ಇದ್ದುದರಿಂದ ಎರಡೂ ಕಡೆ ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಸೇರಿದ್ದರು. ಪರಿಸ್ಥಿತಿ ಬಿಗಾಡಾಯಿಸುವ ಲಕ್ಷಣ ಗೋಚರಿಸುತ್ತಿದಂತೆ ಪೋಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದು ಜನರನ್ನು ಚದುರಿಸಿದ್ದಾರೆ.
Fight between Congress and BJP near Haleyangadi panchyath over election's in Mangalore.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm