ಬ್ರೇಕಿಂಗ್ ನ್ಯೂಸ್
11-08-23 10:57 pm Mangalore Correspondent ಕರಾವಳಿ
ಉಳ್ಳಾಲ, ಆ.11: ಮಂಗಳೂರು ವಿವಿಯ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಳೆದ 34 ವರ್ಷಗಳಿಂದ(1989 ರಿಂದ) ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾದ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಪಿಎಚ್ಡಿ ಪದವಿ ಪಡೆದುಕೊಂಡಿದ್ದಾರೆ.
ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ, ಟಿಪ್ಪು- ಹೈದರಾಲಿ ಇತಿಹಾಸ ಕಥನ, ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್ ಆಂಡ್ ಹಿಸ್ಟರಿ, ಕೊಲೊನಿಯಲಿಸಂ ಆಂಡ್ ನ್ಯಾಷನಲಿಸಂ ಇನ್ ಮಾಡರ್ನ್ ಏಷಿಯಾ ಕೃತಿ ಸೇರಿದಂತೆ ಅನೇಕ ಅಮೂಲ್ಯ ಇತಿಹಾಸ ಗ್ರಂಥಗಳನ್ನು ಉದಯ್ ಬಾರ್ಕೂರು ಪ್ರಕಟಿಸಿದ್ದಾರೆ.
ಮೃತರು ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಉದಯ್ ಬಾರ್ಕೂರು ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Mangalore Univercity professor Uday Barkur (59) dies of heart attack.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 04:19 pm
HK News Staffer
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm
ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಗ...
18-05-26 12:21 pm
Jones Asset Fraud, Bangalore: ಲೀಸ್ ಮನೆ ಹೆಸರಿನ...
18-05-26 11:36 am
ಬೇರೊಬ್ಬ ಮಹಿಳೆ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇ...
17-05-26 09:10 pm