ಬ್ರೇಕಿಂಗ್ ನ್ಯೂಸ್
11-08-23 10:57 pm Mangalore Correspondent ಕರಾವಳಿ
ಉಳ್ಳಾಲ, ಆ.11: ಮಂಗಳೂರು ವಿವಿಯ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಳೆದ 34 ವರ್ಷಗಳಿಂದ(1989 ರಿಂದ) ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾದ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಪಿಎಚ್ಡಿ ಪದವಿ ಪಡೆದುಕೊಂಡಿದ್ದಾರೆ.
ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ, ಟಿಪ್ಪು- ಹೈದರಾಲಿ ಇತಿಹಾಸ ಕಥನ, ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್ ಆಂಡ್ ಹಿಸ್ಟರಿ, ಕೊಲೊನಿಯಲಿಸಂ ಆಂಡ್ ನ್ಯಾಷನಲಿಸಂ ಇನ್ ಮಾಡರ್ನ್ ಏಷಿಯಾ ಕೃತಿ ಸೇರಿದಂತೆ ಅನೇಕ ಅಮೂಲ್ಯ ಇತಿಹಾಸ ಗ್ರಂಥಗಳನ್ನು ಉದಯ್ ಬಾರ್ಕೂರು ಪ್ರಕಟಿಸಿದ್ದಾರೆ.
ಮೃತರು ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಉದಯ್ ಬಾರ್ಕೂರು ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Mangalore Univercity professor Uday Barkur (59) dies of heart attack.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm