ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm