ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm