ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.
ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm