ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm