ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm