ಬ್ರೇಕಿಂಗ್ ನ್ಯೂಸ್
13-08-23 08:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಿಷೇಧಿತ ಪಿಎಫ್ಐ ಸಂಘಟನೆಗೆ ಫಂಡಿಂಗ್ ಮಾಡಿರುವ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಉಳ್ಳಾಲದ ಕಿನ್ಯಾ, ಮಂಗಳೂರು ಹೊರವಲಯದ ವಳಚ್ಚಿಲ್ ಪದವು ಮತ್ತು ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲದ ಕಿನ್ಯಾದಲ್ಲಿ ಕೇರಳದ ಮೂಲದ ಇಬ್ರಾಹಿಂ ಎಂಬ ಧಾರ್ಮಿಕ ಶಿಕ್ಷಕರೊಬ್ಬರ ಮನೆಗೆ ದಾಳಿ ನಡೆಸಿದ್ದು, ಮನೆಯಲ್ಲಿದ್ದ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ರಾಹಿಂ ಒಂದು ವರ್ಷದ ಹಿಂದೆ ಪಿಎಫ್ಐ ಸಂಘಟನೆ ನಿಷೇಧ ಬೆನ್ನಲ್ಲೇ ನಾಪತ್ತೆಯಾಗಿದ್ದರು. ನಿಷೇಧ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್ಐ ನಾಯಕರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧರಿಸಿ ಇಬ್ರಾಹಿಂ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದೀಗ ಆತನ ಮನೆಯಲ್ಲಿ ತಲಾಶ್ ನಡೆಸಿದ್ದಾರೆ.

ಪಿಎಫ್ಐ ಪರವಾಗಿ ಫಂಡಿಂಗ್ ನಡೆಸುತ್ತಿರುವ ಹವಾಲಾ ನೆಟ್ವರ್ಕ್ ನಲ್ಲಿ ಇಬ್ರಾಹಿಂ ಲಿಂಕ್ ಹೊಂದಿದ್ದಾನೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ವಳಚ್ಚಿಲ್ ಪದವು ನಿವಾಸಿ ಮುಸ್ತಾಕ್ ಮತ್ತು ಮೆಲ್ಕಾರ್ ನಲ್ಲಿ ಇಬ್ರಾಹಿಂ ನಂದಾವರ ಎಂಬವರ ಮನೆಗೂ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿಗಳಿವೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ.
NIA riads three places of Mangalore in Ullal, Valachil and Melkar over PFI funding network. A regious teacher house was also raided by NIA at Ullal. The Raid was conducted suspecting Hawala Network.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm