ಬ್ರೇಕಿಂಗ್ ನ್ಯೂಸ್
14-08-23 12:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ. ಕಾಂಗ್ರೆಸ್ ನಾಯಕರ ಮನೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮಾತು ಕೇಳದ ಅಧಿಕಾರಿಗಳನ್ನು ಸಸ್ಪೆಂಡ್, ವರ್ಗಾವಣೆ ಮಾಡಿಸಿ ಹೆದರಿಸುತ್ತಿದ್ದಾರೆ.


ಈ ರೀತಿಯಾದರೆ ಆಡಳಿತ ವ್ಯವಸ್ಥೆ ಹೇಗಿದೆ ಎನ್ನುವುದು ತಿಳಿಯುತ್ತದೆ. ಕೂಡಲೇ ಅಮಾನತು ಮಾಡಿರುವ ಅಧಿಕಾರಿಗಳನ್ನು ಹಿಂಪಡೆಯಬೇಕು. ಮುಂದೆ ಈ ರೀತಿ ಮಾಡುವುದಿಲ್ಲವೆಂದು ಜಿಲ್ಲಾಧಿಕಾರಿ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದು ಶಾಸಕರು ಧರಣಿ ನಡೆಸಿದ್ದಾರೆ.
ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾಗಿಯಾಗಿದ್ದಾರೆ.


ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಒಂದೆಡೆ ಶಾಸಕರಿಗೆ ಟ್ರೈನಿಂಗ್ ಕೊಡ್ತೀರಿ, ಇಲ್ಲಿ ಶಾಸಕರನ್ನು ಅಸಹಾಯಕರಾಗಿ ಮಾಡ್ತೀರಿ. ಮೊನ್ನೆ ಮುಖ್ಯಮಂತ್ರಿ ಬಂದು ಅಧಿಕಾರಿಗಳ ಅಮಾನತು ಹಿಂಪಡೆಯುವಂತೆ ಹೇಳಿದ್ದಾರೆ. ಮುಖ್ಯಮಂತ್ರಿ ಹೇಳಿದರೂ ಅಧಿಕಾರಿಗಳು ಕೇಳುತ್ತಿಲ್ಲ ಅಂದರೇನು..? ಶಾಸಕರು ಗ್ರಾಪಂ ಕಚೇರಿಗೆ ಹೋಗಲು 200 ಪೊಲೀಸರನ್ನು ಹಾಕಿ ತಡೆಯುತ್ತಾರೆಂದ್ರೆ ಏನು ಅವಸ್ಥೆ. ಅದಕ್ಕಾಗಿ ನಾವು ಈಗ ಪ್ರತಿಭಟನೆ ಕುಳಿತಿದ್ದೇವೆ ಎಂದು ಹೇಳಿದರು.
BJP MLAs and leaders protest against DC of Mangalore over negligence, protest inside DC office.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm