ಬ್ರೇಕಿಂಗ್ ನ್ಯೂಸ್
14-08-23 12:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ. ಕಾಂಗ್ರೆಸ್ ನಾಯಕರ ಮನೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮಾತು ಕೇಳದ ಅಧಿಕಾರಿಗಳನ್ನು ಸಸ್ಪೆಂಡ್, ವರ್ಗಾವಣೆ ಮಾಡಿಸಿ ಹೆದರಿಸುತ್ತಿದ್ದಾರೆ.


ಈ ರೀತಿಯಾದರೆ ಆಡಳಿತ ವ್ಯವಸ್ಥೆ ಹೇಗಿದೆ ಎನ್ನುವುದು ತಿಳಿಯುತ್ತದೆ. ಕೂಡಲೇ ಅಮಾನತು ಮಾಡಿರುವ ಅಧಿಕಾರಿಗಳನ್ನು ಹಿಂಪಡೆಯಬೇಕು. ಮುಂದೆ ಈ ರೀತಿ ಮಾಡುವುದಿಲ್ಲವೆಂದು ಜಿಲ್ಲಾಧಿಕಾರಿ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದು ಶಾಸಕರು ಧರಣಿ ನಡೆಸಿದ್ದಾರೆ.
ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾಗಿಯಾಗಿದ್ದಾರೆ.


ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಒಂದೆಡೆ ಶಾಸಕರಿಗೆ ಟ್ರೈನಿಂಗ್ ಕೊಡ್ತೀರಿ, ಇಲ್ಲಿ ಶಾಸಕರನ್ನು ಅಸಹಾಯಕರಾಗಿ ಮಾಡ್ತೀರಿ. ಮೊನ್ನೆ ಮುಖ್ಯಮಂತ್ರಿ ಬಂದು ಅಧಿಕಾರಿಗಳ ಅಮಾನತು ಹಿಂಪಡೆಯುವಂತೆ ಹೇಳಿದ್ದಾರೆ. ಮುಖ್ಯಮಂತ್ರಿ ಹೇಳಿದರೂ ಅಧಿಕಾರಿಗಳು ಕೇಳುತ್ತಿಲ್ಲ ಅಂದರೇನು..? ಶಾಸಕರು ಗ್ರಾಪಂ ಕಚೇರಿಗೆ ಹೋಗಲು 200 ಪೊಲೀಸರನ್ನು ಹಾಕಿ ತಡೆಯುತ್ತಾರೆಂದ್ರೆ ಏನು ಅವಸ್ಥೆ. ಅದಕ್ಕಾಗಿ ನಾವು ಈಗ ಪ್ರತಿಭಟನೆ ಕುಳಿತಿದ್ದೇವೆ ಎಂದು ಹೇಳಿದರು.
BJP MLAs and leaders protest against DC of Mangalore over negligence, protest inside DC office.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm