ಬ್ರೇಕಿಂಗ್ ನ್ಯೂಸ್
14-08-23 12:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ. ಕಾಂಗ್ರೆಸ್ ನಾಯಕರ ಮನೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಮಾತು ಕೇಳದ ಅಧಿಕಾರಿಗಳನ್ನು ಸಸ್ಪೆಂಡ್, ವರ್ಗಾವಣೆ ಮಾಡಿಸಿ ಹೆದರಿಸುತ್ತಿದ್ದಾರೆ.


ಈ ರೀತಿಯಾದರೆ ಆಡಳಿತ ವ್ಯವಸ್ಥೆ ಹೇಗಿದೆ ಎನ್ನುವುದು ತಿಳಿಯುತ್ತದೆ. ಕೂಡಲೇ ಅಮಾನತು ಮಾಡಿರುವ ಅಧಿಕಾರಿಗಳನ್ನು ಹಿಂಪಡೆಯಬೇಕು. ಮುಂದೆ ಈ ರೀತಿ ಮಾಡುವುದಿಲ್ಲವೆಂದು ಜಿಲ್ಲಾಧಿಕಾರಿ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದು ಶಾಸಕರು ಧರಣಿ ನಡೆಸಿದ್ದಾರೆ.
ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾಗಿಯಾಗಿದ್ದಾರೆ.


ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಒಂದೆಡೆ ಶಾಸಕರಿಗೆ ಟ್ರೈನಿಂಗ್ ಕೊಡ್ತೀರಿ, ಇಲ್ಲಿ ಶಾಸಕರನ್ನು ಅಸಹಾಯಕರಾಗಿ ಮಾಡ್ತೀರಿ. ಮೊನ್ನೆ ಮುಖ್ಯಮಂತ್ರಿ ಬಂದು ಅಧಿಕಾರಿಗಳ ಅಮಾನತು ಹಿಂಪಡೆಯುವಂತೆ ಹೇಳಿದ್ದಾರೆ. ಮುಖ್ಯಮಂತ್ರಿ ಹೇಳಿದರೂ ಅಧಿಕಾರಿಗಳು ಕೇಳುತ್ತಿಲ್ಲ ಅಂದರೇನು..? ಶಾಸಕರು ಗ್ರಾಪಂ ಕಚೇರಿಗೆ ಹೋಗಲು 200 ಪೊಲೀಸರನ್ನು ಹಾಕಿ ತಡೆಯುತ್ತಾರೆಂದ್ರೆ ಏನು ಅವಸ್ಥೆ. ಅದಕ್ಕಾಗಿ ನಾವು ಈಗ ಪ್ರತಿಭಟನೆ ಕುಳಿತಿದ್ದೇವೆ ಎಂದು ಹೇಳಿದರು.
BJP MLAs and leaders protest against DC of Mangalore over negligence, protest inside DC office.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm