ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 01:15 pm
Mangalore Correspondent
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm