ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 01:15 pm
Mangalore Correspondent
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm