ಬ್ರೇಕಿಂಗ್ ನ್ಯೂಸ್
17-08-23 03:36 pm Mangalore Correspondent ಕರಾವಳಿ
ಉಳ್ಳಾಲ, ಆ.17: ವ್ಯಕ್ತಿಯೊಬ್ಬ ಆಹಾರದಲ್ಲಿ ವಿಷವಿಕ್ಕಿ ಸುಮಾರು 25 ನಾಯಿಗಳ ಮಾರಣ ಹೋಮ ನಡೆಸಿದ್ದಾನೆಂದು ಆರೋಪ ಕೇಳಿಬಂದಿದೆ. ವಿಷಾಹಾರ ಸೇವಿಸಿದ ಹಸುವೊಂದು ಸಾವನ್ನಪ್ಪಿದ್ದು ಕೃತ್ಯ ಎಸಗಿದವನ ಬಂಧನಕ್ಕೆ ಸ್ಥಳೀಯರು ಮತ್ತು ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ.
ತಲಪಾಡಿಯ ಅಲಂಕಾರಗುಡ್ಡೆ, ಭಂಡಾರಮನೆ ಬಳಿ ನಿವಾಸಿ ಅಮಿತ ಎಂಬವರು ಸಾಕುತ್ತಿದ್ದ ಹಸುವನ್ನು ವಿಷ ಪ್ರಾಷಣಗೈದು ಕೊಲ್ಲಲಾಗಿದೆ. ಸ್ಥಳೀಯ ನಿವಾಸಿ ಖಾದರ್ ಎಂಬಾತ ಕೃತ್ಯ ನಡೆಸಿದ್ದಾನೆಂದು ಅಮಿತ ಆರೋಪಿಸಿದ್ದಾರೆ. ಖಾದರ್ ಮೇಕೆಗಳನ್ನ ಸಾಕುತ್ತಿದ್ದು ಇತ್ತೀಚೆಗೆ ಆತನ ಮೇಕೆಯೊಂದನ್ನ ನಾಯಿಗಳು ದಾಳಿ ನಡೆಸಿ ಕೊಂದಿದ್ದವು. ಇದರಿಂದ ಕುಪಿತಗೊಂಡ ಖಾದರ್ ಸುತ್ತಮುತ್ತಲ ಬೀದಿ ಮತ್ತು ಸಾಕು ನಾಯಿಗಳಿಗೆ ವಿಷಾಹಾರ ಉಣಿಸಿ ಸುಮಾರು 25 ರಷ್ಟು ನಾಯಿಗಳ ಸಾವಿಗೆ ಕಾರಣವಾಗಿದ್ದಾನೆ. ನಾಯಿಗಳಿಗೆ ವಿಷ ಪ್ರಾಷಣ ಮಾಡಿದ ಬಗ್ಗೆ ಖಾದರ್ ಬಹಿರಂಗವಾಗಿ ಜನರಲ್ಲಿ ಹೇಳಿದ್ದಾಗಿ ಅಮಿತ ಅವರು ಆರೋಪಿಸಿದ್ದಾರೆ. ಇಂದು ಕೂಡ ನಾಯಿಗಳು ವಿಷಾಹಾರ ಸೇವಿಸಿ ವಿಲ ವಿಲ ಒದ್ದಾಡುತ್ತಿರುವ ದೃಶ್ಯ ಮಾಧ್ಯಮದ ಕ್ಯಾಮೆರಾಕ್ಕೆ ಸಿಕ್ಕಿವೆ.




ಅಮಿತ ಅವರು ದನ ಸಾಕಣೆ ಮಾಡುತ್ತಿದ್ದು ನಿನ್ನೆ ಸಂಜೆ ಹಸುವೊಂದನ್ನ ಹುಲ್ಲು ಮೇಯಲು ಮನೆ ಪಕ್ಕದ ದೈವಸ್ಥಾನದ ಬಳಿ ಕಟ್ಟಿ ಹಾಕಿದ್ದರು. ಆರೋಗ್ಯವಾಗಿದ್ದ ಹಸು ನಿನ್ನೆ ರಾತ್ರಿ ನರಳುತ್ತಲೇ ಸಾವನ್ನಪ್ಪಿದೆ. ಪರಿಶೀಲನೆ ನಡೆಸಿದ ಪಶು ವೈದ್ಯರು ಹಸು ವಿಷಾಹಾರ ಸೇವಿಸಿ ಸತ್ತಿರುವುದಾಗಿ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಬಜರಂಗದಳ ಉಳ್ಳಾಲ ನಗರ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಭೇಟಿ ನೀಡಿದ್ದು ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿ ಕೃತ್ಯ ಎಸಗಿದ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ತಲಪಾಡಿ ಗ್ರಾ.ಪಂ ಪಿಡಿಒ ಮತ್ತು ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿಯಲ್ಲಿ ಆಗ್ರಹಿಸಿದ್ದಾರೆ.
ಜಾನುವಾರುಗಳನ್ನ ವಿಷ ಪ್ರಾಷಣಗೈದು ಕೊಂದ ಶಂಕಿತ ಆರೋಪಿ ಖಾದರ್ ಈ ಹಿಂದೆ ಗಂಧ ಕಳ್ಳ ಸಾಗಣೆಯಲ್ಲಿ ತೊಡಗಿದ್ದು, ಸ್ಥಳೀಯ ಮಹಿಳೆಯರಿಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
Carcasses of 25 stray dogs found in Talapady in Mangalore, suspect poisoning. The incident was brought to light by animal rights activists who spotted the remains.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm