ಬ್ರೇಕಿಂಗ್ ನ್ಯೂಸ್
17-08-23 09:28 pm Mangalore Correspondent ಕರಾವಳಿ
ಉಳ್ಳಾಲ, ಆ.17: ಉಳ್ಳಾಲ ಬೀಚಲ್ಲಿ ರಾಶಿ ಬಿದ್ದಿದ್ದ ತ್ಯಾಜ್ಯದ ಕೊಂಪೆಯನ್ನ ಜನಾಕ್ರೋಶದ ಮೇರೆಗೆ ಉಳ್ಳಾಲ ನಗರಸಭೆ ಆಡಳಿತವು ಕಡೆಗೂ ತರಾತುರಿಯಲ್ಲಿ ತೆರವುಗೊಳಿಸಿತ್ತು. ಇದೀಗ ನಗರಸಭಾ ಕಚೇರಿ ಮುಂದಿನ ಮಹಾತ್ಮ ಗಾಂಧಿ ರಂಗ ಮಂಟಪದಲ್ಲೇ ತ್ಯಾಜ್ಯವನ್ನ ವಿಂಗಡಣೆ ಮಾಡುತ್ತಿದ್ದಾರೆ. ಇದರಿಂದಾಗಿ ಉಳ್ಳಾಲದ ಹೃದಯ ಭಾಗ ಗಬ್ಬೆದ್ದು ನಾರುತ್ತಿದ್ದು ವಾಸನೆ ಗ್ರಹಿಸಲು ನಗರಸಭೆ ಪೌರಾಯುಕ್ತೆ ವಾಣಿ ಆಳ್ವರಿಗೆ ಮೂಗಿಲ್ಲದಾಯ್ತೇ ಎಂಬ ಪ್ರಶ್ನೆ ಮೂಡಿದೆ.
ಉಳ್ಳಾಲ ನಗರದಾದ್ಯಂತ ಸಂಗ್ರಹಿಸಿದ ತ್ಯಾಜ್ಯವನ್ನ ನಗರಸಭೆ ಕಚೇರಿಯ ಮುಂಭಾಗದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಪ್ರತ್ಯೇಕಿಸಿ ಮರು ಲೋಡ್ ಮಾಡಲಾಗುತ್ತಿದೆ. ಈ ಹಿಂದೆ ಅನೇಕ ವರ್ಷಗಳಿಂದ ಉಳ್ಳಾಲ ಬೀಚ್ ರಸ್ತೆ ಬದಿಯಲ್ಲೇ ರಾಶಿಗಟ್ಟಲೆ ತ್ಯಾಜ್ಯವನ್ನ ಸುರಿಯಲಾಗುತ್ತಿತ್ತು. ರೊಚ್ಚಿಗೆದ್ದ ಸ್ಥಳೀಯರು ತ್ಯಾಜ್ಯವನ್ನ ನಗರಸಭೆ ಕಚೇರಿಗೆ ತಂದು ಸುರಿಯಲು ಮುಂದಾದಾಗ ಎಚ್ಚೆತ್ತ ನಗರಸಭೆ ಅಧಿಕಾರಿಗಳು ತರಾತುರಿಯಲ್ಲಿ ತ್ಯಾಜ್ಯವನ್ನು ವಿಲೇವಾರಿಗೊಳಿಸಿ ಪ್ರದೇಶವನ್ನ ಸ್ವಚ್ಛಗೊಳಿಸಿದ್ದರು.



ಈಗ ಬೀಚ್ ರಸ್ತೆ ಬಿಟ್ಟು ತ್ಯಾಜ್ಯ ರಂಗಮಂದಿರಕ್ಕೆ ಶಿಫ್ಟ್ ಆಗಿದೆ. ಇಷ್ಟೊಂದು ವಿಸ್ತೀರ್ಣವುಳ್ಳ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಂಗಡಿಸಲು ಬೇರೆ ಸ್ಥಳವೇ ಸಿಗದಿರೋದು ಹಾಸ್ಯಾಸ್ಪದ ಎಂಬಂತಿದೆ. ಇದಕ್ಕೆ ಅಧಿಕಾರಿ, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣವಾಗಿದೆ.



ಗಬ್ಬೆದ್ದ ರಂಗಮಂದಿರದಲ್ಲಿ ಗಣೇಶೋತ್ಸವ ಸಾಧ್ಯವೇ..?
ಉಳ್ಳಾಲ ವಿದ್ಯಾರಣ್ಯ ಕಲಾವೃಂದದ ವತಿಯಿಂದ ಪ್ರತೀ ವರ್ಷ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಗಣಪತಿಯನ್ನ ಪ್ರತಿಷ್ಟಾಪಿಸಿ ಉತ್ಸವ ನಡೆಸಲಾಗುತ್ತದೆ. ಅದರಂತೆ, ಮುಂದಿನ ತಿಂಗಳಲ್ಲಿ ಇಲ್ಲಿ ಗಣೇಶೋತ್ಸವ ನಡೆಯಬೇಕು. ಆದರೆ, ಈಗಿನ ಸ್ಥಿತಿಯಲ್ಲಿ ಗಣೇಶೋತ್ಸವ ನಡೆಸುವಂತಿಲ್ಲ. ಹೀಗಾಗಿ ಉತ್ಸವ ನಡೆಯಬಾರದೆಂಬ ದೃಷ್ಟಿಯಲ್ಲಿ ಕಾಣದ ಕೈಗಳು ಬೇಕಂತಲೇ ಇಲ್ಲಿ ತ್ಯಾಜ್ಯ ಸುರಿಯುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಆದಷ್ಟು ಬೇಗನೆ ಈ ಪ್ರದೇಶದಲ್ಲಿ ತ್ಯಾಜ್ಯ ವಿಂಗಡನೆ ಕಾರ್ಯ ನಿಲ್ಲಿಸಿ ಗಣೇಶೋತ್ಸವಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದರೆ ನಾವು ನಗರಸಭೆ ವಿರುದ್ಧ ಹೋರಾಟ ನಡೆಸುವುದಾಗಿ ವಿದ್ಯಾರಣ್ಯ ಕಲಾವೃಂದದ ಅಧ್ಯಕ್ಷರಾದ ವಿಜಯ ಕುಮಾರ್ ತಿಳಿಸಿದ್ದಾರೆ.
Mangalore Ullal municipal corporations turns into Garbage dumpyard.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm