ಬ್ರೇಕಿಂಗ್ ನ್ಯೂಸ್
17-08-23 09:28 pm Mangalore Correspondent ಕರಾವಳಿ
ಉಳ್ಳಾಲ, ಆ.17: ಉಳ್ಳಾಲ ಬೀಚಲ್ಲಿ ರಾಶಿ ಬಿದ್ದಿದ್ದ ತ್ಯಾಜ್ಯದ ಕೊಂಪೆಯನ್ನ ಜನಾಕ್ರೋಶದ ಮೇರೆಗೆ ಉಳ್ಳಾಲ ನಗರಸಭೆ ಆಡಳಿತವು ಕಡೆಗೂ ತರಾತುರಿಯಲ್ಲಿ ತೆರವುಗೊಳಿಸಿತ್ತು. ಇದೀಗ ನಗರಸಭಾ ಕಚೇರಿ ಮುಂದಿನ ಮಹಾತ್ಮ ಗಾಂಧಿ ರಂಗ ಮಂಟಪದಲ್ಲೇ ತ್ಯಾಜ್ಯವನ್ನ ವಿಂಗಡಣೆ ಮಾಡುತ್ತಿದ್ದಾರೆ. ಇದರಿಂದಾಗಿ ಉಳ್ಳಾಲದ ಹೃದಯ ಭಾಗ ಗಬ್ಬೆದ್ದು ನಾರುತ್ತಿದ್ದು ವಾಸನೆ ಗ್ರಹಿಸಲು ನಗರಸಭೆ ಪೌರಾಯುಕ್ತೆ ವಾಣಿ ಆಳ್ವರಿಗೆ ಮೂಗಿಲ್ಲದಾಯ್ತೇ ಎಂಬ ಪ್ರಶ್ನೆ ಮೂಡಿದೆ.
ಉಳ್ಳಾಲ ನಗರದಾದ್ಯಂತ ಸಂಗ್ರಹಿಸಿದ ತ್ಯಾಜ್ಯವನ್ನ ನಗರಸಭೆ ಕಚೇರಿಯ ಮುಂಭಾಗದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಪ್ರತ್ಯೇಕಿಸಿ ಮರು ಲೋಡ್ ಮಾಡಲಾಗುತ್ತಿದೆ. ಈ ಹಿಂದೆ ಅನೇಕ ವರ್ಷಗಳಿಂದ ಉಳ್ಳಾಲ ಬೀಚ್ ರಸ್ತೆ ಬದಿಯಲ್ಲೇ ರಾಶಿಗಟ್ಟಲೆ ತ್ಯಾಜ್ಯವನ್ನ ಸುರಿಯಲಾಗುತ್ತಿತ್ತು. ರೊಚ್ಚಿಗೆದ್ದ ಸ್ಥಳೀಯರು ತ್ಯಾಜ್ಯವನ್ನ ನಗರಸಭೆ ಕಚೇರಿಗೆ ತಂದು ಸುರಿಯಲು ಮುಂದಾದಾಗ ಎಚ್ಚೆತ್ತ ನಗರಸಭೆ ಅಧಿಕಾರಿಗಳು ತರಾತುರಿಯಲ್ಲಿ ತ್ಯಾಜ್ಯವನ್ನು ವಿಲೇವಾರಿಗೊಳಿಸಿ ಪ್ರದೇಶವನ್ನ ಸ್ವಚ್ಛಗೊಳಿಸಿದ್ದರು.



ಈಗ ಬೀಚ್ ರಸ್ತೆ ಬಿಟ್ಟು ತ್ಯಾಜ್ಯ ರಂಗಮಂದಿರಕ್ಕೆ ಶಿಫ್ಟ್ ಆಗಿದೆ. ಇಷ್ಟೊಂದು ವಿಸ್ತೀರ್ಣವುಳ್ಳ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಂಗಡಿಸಲು ಬೇರೆ ಸ್ಥಳವೇ ಸಿಗದಿರೋದು ಹಾಸ್ಯಾಸ್ಪದ ಎಂಬಂತಿದೆ. ಇದಕ್ಕೆ ಅಧಿಕಾರಿ, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣವಾಗಿದೆ.



ಗಬ್ಬೆದ್ದ ರಂಗಮಂದಿರದಲ್ಲಿ ಗಣೇಶೋತ್ಸವ ಸಾಧ್ಯವೇ..?
ಉಳ್ಳಾಲ ವಿದ್ಯಾರಣ್ಯ ಕಲಾವೃಂದದ ವತಿಯಿಂದ ಪ್ರತೀ ವರ್ಷ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಗಣಪತಿಯನ್ನ ಪ್ರತಿಷ್ಟಾಪಿಸಿ ಉತ್ಸವ ನಡೆಸಲಾಗುತ್ತದೆ. ಅದರಂತೆ, ಮುಂದಿನ ತಿಂಗಳಲ್ಲಿ ಇಲ್ಲಿ ಗಣೇಶೋತ್ಸವ ನಡೆಯಬೇಕು. ಆದರೆ, ಈಗಿನ ಸ್ಥಿತಿಯಲ್ಲಿ ಗಣೇಶೋತ್ಸವ ನಡೆಸುವಂತಿಲ್ಲ. ಹೀಗಾಗಿ ಉತ್ಸವ ನಡೆಯಬಾರದೆಂಬ ದೃಷ್ಟಿಯಲ್ಲಿ ಕಾಣದ ಕೈಗಳು ಬೇಕಂತಲೇ ಇಲ್ಲಿ ತ್ಯಾಜ್ಯ ಸುರಿಯುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಆದಷ್ಟು ಬೇಗನೆ ಈ ಪ್ರದೇಶದಲ್ಲಿ ತ್ಯಾಜ್ಯ ವಿಂಗಡನೆ ಕಾರ್ಯ ನಿಲ್ಲಿಸಿ ಗಣೇಶೋತ್ಸವಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದರೆ ನಾವು ನಗರಸಭೆ ವಿರುದ್ಧ ಹೋರಾಟ ನಡೆಸುವುದಾಗಿ ವಿದ್ಯಾರಣ್ಯ ಕಲಾವೃಂದದ ಅಧ್ಯಕ್ಷರಾದ ವಿಜಯ ಕುಮಾರ್ ತಿಳಿಸಿದ್ದಾರೆ.
Mangalore Ullal municipal corporations turns into Garbage dumpyard.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm