ಛಾಯಾಗ್ರಾಹಕ ದಿನೇಶ್ ಶೆಟ್ಟಿ ಚಿಕಿತ್ಸೆಗೆ ಶಾಸಕ ರಾಜೇಶ್ ನಾಯ್ಕ್ ನೆರವು 

06-11-20 08:05 pm       Mangaluru Correspondent   ಕರಾವಳಿ

ಫರಂಗಿಪೇಟೆಯ ಬಿಜೆಪಿ ಕಾರ್ಯಕರ್ತ ದಿನೇಶ್ ಚಿಕಿತ್ಸೆಯ ನೆರವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ನೀಡಿ ಆರೋಗ್ಯ ವಿಚಾರಿಸಿದ್ದಾರೆ. 

ಬಂಟ್ವಾಳ, ನವೆಂಬರ್ 6: ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫರಂಗಿಪೇಟೆಯ ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಕೊಟ್ಟಿಂಜ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 

ಅಲ್ಲದೆ, ದಿನೇಶ್ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ನೀಡಿದ್ದಾರೆ. ಅ.28 ರಂದು ಬುಧವಾರ ರಾತ್ರಿ 7.30ರ  ಸುಮಾರಿಗೆ ಪುದು ಗ್ರಾಮದ ಕೊಟ್ಟಿಂಜ ನಿವಾಸಿ, ಛಾಯಾಗ್ರಾಹಕ ದಿನೇಶ್ ಶೆಟ್ಟಿ ಅವರ ಫರಂಗಿಪೇಟೆಯಲ್ಲಿರುವ ಸ್ಟುಡಿಯೋಗೆ ನಾಲ್ಕು ಮಂದಿ ನುಗ್ಗಿ ತಲೆ, ಹೊಟ್ಟೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದರು. ದಿನೇಶ್ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಶಾಸಕ ರಾಜೇಶ್ ನಾಯ್ಕ್ ಜತೆ ಪುದು ಜಿ.ಪಂ. ಸದಸ್ಯ ರವೀಂದ್ರ ಕಂಬಳಿ, ಗಣೇಶ್ ರೈ ಮಾಣಿ ಮತ್ತಿತರರು ಇದ್ದರು.

Photographer Dinesh Shetty of Trisha Studio in Farangipete who was stabbed by miscreants was rendered financial help by Bantwal MLA Rajesh Naik.