ಬ್ರೇಕಿಂಗ್ ನ್ಯೂಸ್
18-08-23 04:51 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 17: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ, ಕೊಲೆ ಘಟನೆಗೆ ಜಾಗದ ಮೋಹ ಕಾರಣ. ಅದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದು ಧರ್ಮಸ್ಥಳದ ಹೆಗಡೆ ಪರಿವಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಹೆಗಡೆ ಪರಿವಾರದಂತಹ ಜಮೀನ್ದಾರರು ಹುಟ್ಟಲೇಬಾರದು. ತಾಲೂಕಿನಲ್ಲಿ ಎಲ್ಲಾ ಕಡೆ ಜಮೀನುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ತಂದೆಯೂ ಜಮೀನ್ದಾರ ಆಗಿದ್ದವರು. ಆದರೆ ಯಾರ್ಯಾರ ಜಮೀನನ್ನು ವಶಪಡಿಸಿಕೊಳ್ಳಲು ನಾನು ಬಿಡಲಿಲ್ಲ. ಆ ಕಾರಣಕ್ಕಾಗಿ ನನ್ನ ಹೆಸರಿನಲ್ಲಿ ಇಂದಿಗೂ ಯಾವುದೇ ಜಮೀನಿಲ್ಲ.
ಈ ಪರಿವಾರ ಮಾತ್ರ ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳ ಪಕ್ಕದ ಜಮೀನುಗಳನ್ನೇ ವಶಪಡಿಸಿಕೊಳ್ಳುತ್ತಿದ್ದಾರೆ. ಬಿಟ್ಟಿಯಾಗಿ ಜಮೀನು ಸಿಕ್ಕಿದರೆ ಆ ಪರಿವಾರಕ್ಕೆ ಭಾರೀ ಖುಷಿ. ಹಣ ಕೊಟ್ಟು ಜಮೀನು ಪಡೆದಿದ್ದರೆ ಅವರಿಗೆ ಕೊಂಚ ಬಿಸಿ. ಇಂತಹ ಜಮೀನ್ದಾರಿಕೆಯನ್ನು ಜನರು ವಿರೋಧಿಸಬೇಕು. ವಿರೋಧಿಸದೇ ಇದ್ದಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತದೆ.
ಸೌಜನ್ಯ ಪ್ರಕರಣವೂ ಇದೇ ಕಾರಣಕ್ಕೆ ನಡೆದಿರುವುದು. ಸೌಜನ್ಯ ಕೊಲೆ ನಡೆದಿರುವುದೂ ಜಾಗದ ವಿಚಾರಕ್ಕಾಗಿ ಎಂದು ನೇರವಾಗಿ ವಸಂತ ಬಂಗೇರ ಸಾರ್ವಜನಿಕ ವೇದಿಕೆಯಲ್ಲಿ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ. ಈಗಾಗಲೇ ಕರಾವಳಿಯಲ್ಲಿ ಸಂಚಲನ ಎಬ್ಬಿಸಿರುವ ಸೌಜನ್ಯಾ ಪ್ರಕರಣದ ಬಗ್ಗೆ ವಸಂತ ಬಂಗೇರ ನೀಡುತ್ತಿರುವ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಏಳುವಂತೆ ಮಾಡಿದೆ.
#Dharmasthala #Sowjanya was killed becuase of Land dispute says former congress MLA of #Belthangady #VasanthaBangera, sparks controversy. The video of this has gone viral on social media. #breakingnews pic.twitter.com/JT63nYUHZg
— Headline Karnataka (@hknewsonline) August 18, 2023
Dharmasthala Sowjanya was killed becuase of Land dispute says former congress MLA of Belthangady Vasantha Bangera, sparks controversy. The video of this has gone viral on social media.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm