ಬ್ರೇಕಿಂಗ್ ನ್ಯೂಸ್
19-08-23 05:36 pm Mangalore Correspondent ಕರಾವಳಿ
ಉಳ್ಳಾಲ, ಆ.19: ತಲಪಾಡಿ ಅಲಂಕಾರಗುಡ್ಡೆಯಲ್ಲಿ ಸುಮಾರು 25 ನಾಯಿಗಳು ಮತ್ತು ಹಸುವೊಂದನ್ನ ವಿಷವಿಕ್ಕಿ ಕೊಂದಿರುವುದಲ್ಲದೆ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆಂದು ನನ್ನ ಮೇಲೆ ಆರೋಪ ಹೊರಿಸಿದ್ದಾರೆ. ತಾನು ತಪ್ಪು ಮಾಡಿಲ್ಲ ಎಂದು ಯಾವುದೇ ದೈವಸ್ಥಾನಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಘಟನೆಯ ಆರೋಪಿಯೆಂದು ಹೇಳಲಾಗುತ್ತಿರುವ ಅಬ್ದುಲ್ ಖಾದರ್ ಮಕ್ಯಾರ್ ಹೇಳಿದ್ದಾರೆ.
ಅಲಂಕಾರ ಗುಡ್ಡೆಯಲ್ಲಿ ಆಹಾರದಲ್ಲಿ ನಿರಂತರ ವಿಷಪ್ರಾಷಣ ನಡೆಸಿ ಸುಮಾರು 25 ನಾಯಿಗಳನ್ನ ಕೊಲ್ಲಲಾಗಿತ್ತು. ಮೊನ್ನೆ ಆ.17 ರಂದು ಸ್ಥಳೀಯ ನಿವಾಸಿ ಸತ್ಯೇಂದ್ರ ಎಂಬವರು ಸಾಕುತ್ತಿದ್ದ 8 ತಿಂಗಳ ಹಸುವೊಂದು ವಿಷಾಹಾರ ಸೇವಿಸಿ ಸಾವನ್ನಪ್ಪಿತ್ತು. ಸ್ಥಳೀಯ ನಿವಾಸಿ ಖಾದರ್ ಎಂಬಾತನೇ ಇಂತಹ ಪೈಶಾಚಿಕ ಕೃತ್ಯಗೈದಿದ್ದಾನೆ ಎಂದು ಸತ್ಯೇಂದ್ರ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.





ಇಂದು ಮಾಧ್ಯಮಗಳ ಮುಂದೆ ಬಂದ ಆರೋಪಿ ಖಾದರ್, ನನ್ನ ಮೇಲೆ ಸ್ಥಳೀಯ ಕೆಲವೇ ಮಂದಿ ಸುಳ್ಳು ಆರೋಪ ಹೊರಿಸಿದ್ದಾರೆ. ನಾನು 62 ವರುಷಗಳಿಂದ ಬಾಳಿದ ಪ್ರದೇಶದ ಅಕ್ಕ, ತಂಗಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಆರೋಪಿಸಿದವರು ಯಾರಿಗೆ ನಾನು ಕಿರುಕುಳ ನೀಡಿದ್ದೇನೆ ಎಂದು ಹೇಳಲಿ. ವಿದೇಶದಲ್ಲಿರುವ ನನ್ನ ಮಗನೂ ಇದರಿಂದ ಸಾಕಷ್ಟು ನೊಂದಿದ್ದು ನನ್ನ ಇಷ್ಟ ಮಿತ್ರರೂ ನನ್ನಲ್ಲಿ ಪ್ರಶ್ನಿಸುತ್ತಿದ್ದಾರೆಂದರು. 25 ನಾಯಿಗಳನ್ನ ಕೊಂದಿದ್ದೇನೆ ಅಂತ ಹೇಳುತ್ತಾರೆ, ಪಂಚಾಯತ್ ಅಧಿಕಾರಿಗಳು ಇದರ ಬಗ್ಗೆ ತನಿಖೆ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದರು.

ದನ ಮೇಯಿಸುವ ಮಹಿಳೆಯರ ಜೊತೆಗೆ ಖಾದರ್ ತಮ್ಮ ವಾಹನ ನಿಲ್ಲಿಸಿ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಸತ್ತ ಹಸುವಿನ ಮಾಲಕಿ ಆರೋಪಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಖಾದರ್ ಮಹಿಳೆಯರು ಸಿಕ್ಕಾಗ ವಾಹನವನ್ನ ನಾನು ನಿಲ್ಲಿಸೋಲ್ಲ. ಸ್ಲೋ ಮಾಡ್ತೇನಷ್ಟೆ. ಮಹಿಳೆಯರ ಕೈಯಲ್ಲಿ ದನದ ಹಗ್ಗ ಇರುತ್ತೆ. ಹಗ್ಗ ವಾಹನಕ್ಕೆ ಸುತ್ತಿ ಕೆಳಗೆ ಬೀಳಬಾರದೆಂಬ ಕಾಳಜಿಯಿಂದ ಗಾಡಿಯನ್ನ ಸ್ಲೋ ಮಾಡ್ತೇನಷ್ಟೆ ಎಂದಾಗ ಖಾದರ್ ಹಿಂದೆ ನಿಂತಿದ್ದ ಬೆಂಬಲಿಗರು ಮುಸಿ, ಮುಸಿ ನಕ್ಕಿದ್ದು ಮಾತ್ರ ಖಾದರ್ ಅವರನ್ನೇ ಅಣಕ ಮಾಡಿದಂತಿತ್ತು.
Ullal 25 dogs killed of poisoning, Mulsim man says ready to promise in any temples of not killing dogs in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm