ಬ್ರೇಕಿಂಗ್ ನ್ಯೂಸ್
19-08-23 06:24 pm Mangalore Correspondent ಕರಾವಳಿ
ಉಳ್ಳಾಲ, ಆ.19: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.
ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರ ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.
ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು. ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Actor Upendra wife Priyanka visits Koragajja temple at Kuthar in Mangalore as she visits Mangalore for movie shooting.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm