ಬ್ರೇಕಿಂಗ್ ನ್ಯೂಸ್
19-08-23 06:24 pm Mangalore Correspondent ಕರಾವಳಿ
ಉಳ್ಳಾಲ, ಆ.19: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.
ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರ ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.
ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು. ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Actor Upendra wife Priyanka visits Koragajja temple at Kuthar in Mangalore as she visits Mangalore for movie shooting.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm