ಬ್ರೇಕಿಂಗ್ ನ್ಯೂಸ್
19-08-23 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಎಸ್ಡಿಎಂ ವಿದ್ಯಾರ್ಥಿನಿ ಕೊಲೆ ಪ್ರಕರಣ ಮರು ತನಿಖೆಯಾಗಬೇಕು, ನೈಜ ಆರೋಪಿಯನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ಸೌಜನ್ಯಾ ಹೋರಾಟ ಸಮಿತಿಯ ಹೆಸರಲ್ಲಿ ಸಭೆ ಆಯೋಜಿಸಿದ್ದು, ಭಾನುವಾರ ಸಂಜೆ 4 ಗಂಟೆಗೆ ಕದ್ರಿ ಮಂಜುನಾಥ ದೇವಸ್ಥಾನದಿಂದ ಸಾವಿರಾರು ಮಂದಿ ಕದ್ರಿ ಮೈದಾನದ ವರೆಗೆ ಕಾಲ್ನಡಿಗೆಯಲ್ಲಿ ಬಂದು ಸಮಾವೇಶ ನಡೆಸಲಿದ್ದಾರೆ. ಪ್ರತಿಭಟನಾ ಸಭೆಯನ್ನು ಕದ್ರಿ ಜೋಗಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಸೌಜನ್ಯಾ ಪರವಾಗಿ ಗಟ್ಟಿಯಾಗಿ ನಿಂತಿರುವ ಬೆಳ್ತಂಗಡಿಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪ್ರಮುಖ ಭಾಷಣ ಮಾಡಲಿದ್ದಾರೆ.

ಈಗಾಗಲೇ ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಪ್ರತಿಭಟನಾ ಸಭೆ ನಡೆದಿದ್ದು, ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಸೌಜನ್ಯಾ ಹೋರಾಟ ಸಮಿತಿಯ ಸಂಚಾಲಕಿ ಪ್ರಸನ್ನ ರವಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ಪ್ರತಿ ಮನೆಯಿಂದ ಸೌಜನ್ಯಾ ಪರವಾಗಿ ಧ್ವನಿ ಎತ್ತಬೇಕು. ಆಕೆಯನ್ನು ಕ್ರೂರವಾಗಿ ಹಿಂಸಿಸಿ ಕೊಂದು ಹಾಕಿರುವ ದುರುಳರನ್ನು ಜೈಲಿಗೆ ತಳ್ಳುವುದಕ್ಕಾಗಿ ಜನರೇ ಮುಂದೆ ಬರಬೇಕಾಗಿದೆ. ನಿಮ್ಮ ಧ್ವನಿಯೇ ನಮಗೆ ಶ್ರೀರಕ್ಷೆ ಎಂದು ಪ್ರಸನ್ನ ರವಿ ಮನವಿ ಮಾಡಿದ್ದಾರೆ.
ಈಗಾಗಲೇ ಸೌಜನ್ಯಾ ಪರವಾಗಿ ಜಾಲತಾಣದಲ್ಲಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಹೋರಾಟ, ಪ್ರತಿಭಟನೆ ನಡೆಯುತ್ತಿದ್ದು, ಜನರು ಮರು ತನಿಖೆಗಾಗಿ ಆಗ್ರಹ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಭಾರೀ ಸಂಶಯಕ್ಕೆ ಎಡೆ ಮಾಡಿದೆ.
Mangalore Saujanya rape and murder case massive protest to be held at Kadri on August 20th under Mahesh Shetty Thimarodi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm