ಬ್ರೇಕಿಂಗ್ ನ್ಯೂಸ್
19-08-23 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಎಸ್ಡಿಎಂ ವಿದ್ಯಾರ್ಥಿನಿ ಕೊಲೆ ಪ್ರಕರಣ ಮರು ತನಿಖೆಯಾಗಬೇಕು, ನೈಜ ಆರೋಪಿಯನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ಸೌಜನ್ಯಾ ಹೋರಾಟ ಸಮಿತಿಯ ಹೆಸರಲ್ಲಿ ಸಭೆ ಆಯೋಜಿಸಿದ್ದು, ಭಾನುವಾರ ಸಂಜೆ 4 ಗಂಟೆಗೆ ಕದ್ರಿ ಮಂಜುನಾಥ ದೇವಸ್ಥಾನದಿಂದ ಸಾವಿರಾರು ಮಂದಿ ಕದ್ರಿ ಮೈದಾನದ ವರೆಗೆ ಕಾಲ್ನಡಿಗೆಯಲ್ಲಿ ಬಂದು ಸಮಾವೇಶ ನಡೆಸಲಿದ್ದಾರೆ. ಪ್ರತಿಭಟನಾ ಸಭೆಯನ್ನು ಕದ್ರಿ ಜೋಗಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಸೌಜನ್ಯಾ ಪರವಾಗಿ ಗಟ್ಟಿಯಾಗಿ ನಿಂತಿರುವ ಬೆಳ್ತಂಗಡಿಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪ್ರಮುಖ ಭಾಷಣ ಮಾಡಲಿದ್ದಾರೆ.

ಈಗಾಗಲೇ ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಪ್ರತಿಭಟನಾ ಸಭೆ ನಡೆದಿದ್ದು, ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಸೌಜನ್ಯಾ ಹೋರಾಟ ಸಮಿತಿಯ ಸಂಚಾಲಕಿ ಪ್ರಸನ್ನ ರವಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ಪ್ರತಿ ಮನೆಯಿಂದ ಸೌಜನ್ಯಾ ಪರವಾಗಿ ಧ್ವನಿ ಎತ್ತಬೇಕು. ಆಕೆಯನ್ನು ಕ್ರೂರವಾಗಿ ಹಿಂಸಿಸಿ ಕೊಂದು ಹಾಕಿರುವ ದುರುಳರನ್ನು ಜೈಲಿಗೆ ತಳ್ಳುವುದಕ್ಕಾಗಿ ಜನರೇ ಮುಂದೆ ಬರಬೇಕಾಗಿದೆ. ನಿಮ್ಮ ಧ್ವನಿಯೇ ನಮಗೆ ಶ್ರೀರಕ್ಷೆ ಎಂದು ಪ್ರಸನ್ನ ರವಿ ಮನವಿ ಮಾಡಿದ್ದಾರೆ.
ಈಗಾಗಲೇ ಸೌಜನ್ಯಾ ಪರವಾಗಿ ಜಾಲತಾಣದಲ್ಲಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಹೋರಾಟ, ಪ್ರತಿಭಟನೆ ನಡೆಯುತ್ತಿದ್ದು, ಜನರು ಮರು ತನಿಖೆಗಾಗಿ ಆಗ್ರಹ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಭಾರೀ ಸಂಶಯಕ್ಕೆ ಎಡೆ ಮಾಡಿದೆ.
Mangalore Saujanya rape and murder case massive protest to be held at Kadri on August 20th under Mahesh Shetty Thimarodi.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 01:15 pm
Mangalore Correspondent
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm