ಬ್ರೇಕಿಂಗ್ ನ್ಯೂಸ್
19-08-23 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಎಸ್ಡಿಎಂ ವಿದ್ಯಾರ್ಥಿನಿ ಕೊಲೆ ಪ್ರಕರಣ ಮರು ತನಿಖೆಯಾಗಬೇಕು, ನೈಜ ಆರೋಪಿಯನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ಸೌಜನ್ಯಾ ಹೋರಾಟ ಸಮಿತಿಯ ಹೆಸರಲ್ಲಿ ಸಭೆ ಆಯೋಜಿಸಿದ್ದು, ಭಾನುವಾರ ಸಂಜೆ 4 ಗಂಟೆಗೆ ಕದ್ರಿ ಮಂಜುನಾಥ ದೇವಸ್ಥಾನದಿಂದ ಸಾವಿರಾರು ಮಂದಿ ಕದ್ರಿ ಮೈದಾನದ ವರೆಗೆ ಕಾಲ್ನಡಿಗೆಯಲ್ಲಿ ಬಂದು ಸಮಾವೇಶ ನಡೆಸಲಿದ್ದಾರೆ. ಪ್ರತಿಭಟನಾ ಸಭೆಯನ್ನು ಕದ್ರಿ ಜೋಗಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಸೌಜನ್ಯಾ ಪರವಾಗಿ ಗಟ್ಟಿಯಾಗಿ ನಿಂತಿರುವ ಬೆಳ್ತಂಗಡಿಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪ್ರಮುಖ ಭಾಷಣ ಮಾಡಲಿದ್ದಾರೆ.

ಈಗಾಗಲೇ ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಪ್ರತಿಭಟನಾ ಸಭೆ ನಡೆದಿದ್ದು, ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಸೌಜನ್ಯಾ ಹೋರಾಟ ಸಮಿತಿಯ ಸಂಚಾಲಕಿ ಪ್ರಸನ್ನ ರವಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ಪ್ರತಿ ಮನೆಯಿಂದ ಸೌಜನ್ಯಾ ಪರವಾಗಿ ಧ್ವನಿ ಎತ್ತಬೇಕು. ಆಕೆಯನ್ನು ಕ್ರೂರವಾಗಿ ಹಿಂಸಿಸಿ ಕೊಂದು ಹಾಕಿರುವ ದುರುಳರನ್ನು ಜೈಲಿಗೆ ತಳ್ಳುವುದಕ್ಕಾಗಿ ಜನರೇ ಮುಂದೆ ಬರಬೇಕಾಗಿದೆ. ನಿಮ್ಮ ಧ್ವನಿಯೇ ನಮಗೆ ಶ್ರೀರಕ್ಷೆ ಎಂದು ಪ್ರಸನ್ನ ರವಿ ಮನವಿ ಮಾಡಿದ್ದಾರೆ.
ಈಗಾಗಲೇ ಸೌಜನ್ಯಾ ಪರವಾಗಿ ಜಾಲತಾಣದಲ್ಲಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಹೋರಾಟ, ಪ್ರತಿಭಟನೆ ನಡೆಯುತ್ತಿದ್ದು, ಜನರು ಮರು ತನಿಖೆಗಾಗಿ ಆಗ್ರಹ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಭಾರೀ ಸಂಶಯಕ್ಕೆ ಎಡೆ ಮಾಡಿದೆ.
Mangalore Saujanya rape and murder case massive protest to be held at Kadri on August 20th under Mahesh Shetty Thimarodi.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm