ಬ್ರೇಕಿಂಗ್ ನ್ಯೂಸ್
19-08-23 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಎಸ್ಡಿಎಂ ವಿದ್ಯಾರ್ಥಿನಿ ಕೊಲೆ ಪ್ರಕರಣ ಮರು ತನಿಖೆಯಾಗಬೇಕು, ನೈಜ ಆರೋಪಿಯನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ಸೌಜನ್ಯಾ ಹೋರಾಟ ಸಮಿತಿಯ ಹೆಸರಲ್ಲಿ ಸಭೆ ಆಯೋಜಿಸಿದ್ದು, ಭಾನುವಾರ ಸಂಜೆ 4 ಗಂಟೆಗೆ ಕದ್ರಿ ಮಂಜುನಾಥ ದೇವಸ್ಥಾನದಿಂದ ಸಾವಿರಾರು ಮಂದಿ ಕದ್ರಿ ಮೈದಾನದ ವರೆಗೆ ಕಾಲ್ನಡಿಗೆಯಲ್ಲಿ ಬಂದು ಸಮಾವೇಶ ನಡೆಸಲಿದ್ದಾರೆ. ಪ್ರತಿಭಟನಾ ಸಭೆಯನ್ನು ಕದ್ರಿ ಜೋಗಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಸೌಜನ್ಯಾ ಪರವಾಗಿ ಗಟ್ಟಿಯಾಗಿ ನಿಂತಿರುವ ಬೆಳ್ತಂಗಡಿಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪ್ರಮುಖ ಭಾಷಣ ಮಾಡಲಿದ್ದಾರೆ.

ಈಗಾಗಲೇ ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಪ್ರತಿಭಟನಾ ಸಭೆ ನಡೆದಿದ್ದು, ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಸೌಜನ್ಯಾ ಹೋರಾಟ ಸಮಿತಿಯ ಸಂಚಾಲಕಿ ಪ್ರಸನ್ನ ರವಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ಪ್ರತಿ ಮನೆಯಿಂದ ಸೌಜನ್ಯಾ ಪರವಾಗಿ ಧ್ವನಿ ಎತ್ತಬೇಕು. ಆಕೆಯನ್ನು ಕ್ರೂರವಾಗಿ ಹಿಂಸಿಸಿ ಕೊಂದು ಹಾಕಿರುವ ದುರುಳರನ್ನು ಜೈಲಿಗೆ ತಳ್ಳುವುದಕ್ಕಾಗಿ ಜನರೇ ಮುಂದೆ ಬರಬೇಕಾಗಿದೆ. ನಿಮ್ಮ ಧ್ವನಿಯೇ ನಮಗೆ ಶ್ರೀರಕ್ಷೆ ಎಂದು ಪ್ರಸನ್ನ ರವಿ ಮನವಿ ಮಾಡಿದ್ದಾರೆ.
ಈಗಾಗಲೇ ಸೌಜನ್ಯಾ ಪರವಾಗಿ ಜಾಲತಾಣದಲ್ಲಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಹೋರಾಟ, ಪ್ರತಿಭಟನೆ ನಡೆಯುತ್ತಿದ್ದು, ಜನರು ಮರು ತನಿಖೆಗಾಗಿ ಆಗ್ರಹ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಭಾರೀ ಸಂಶಯಕ್ಕೆ ಎಡೆ ಮಾಡಿದೆ.
Mangalore Saujanya rape and murder case massive protest to be held at Kadri on August 20th under Mahesh Shetty Thimarodi.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm