ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm