ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 04:19 pm
HK News Staffer
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm
ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಗ...
18-05-26 12:21 pm
Jones Asset Fraud, Bangalore: ಲೀಸ್ ಮನೆ ಹೆಸರಿನ...
18-05-26 11:36 am
ಬೇರೊಬ್ಬ ಮಹಿಳೆ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇ...
17-05-26 09:10 pm